ಕುಂಬ್ರದ ಮಣ್ಣಿನಲ್ಲಿ ಮುಳಕೆಯೊಡೆದು, ಜನರ ಪ್ರೀತಿ-ವಿಶ್ವಾಸವನ್ನು ಸಂಪಾದಿಸಿಕೊಂಡು ಯಶಸ್ವಿಯಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿರುವ ಇಂಡಿಯನ್ ಇವೆಂಟ್ ಆ್ಯಂಡ್ ವೆಡ್ಡಿಂಗ್ಸ್ ಶಾಮಿಯಾನ ಸಂಸ್ಥೆಯ ಗೋಡೌನ್ಗೆ ಇಂದು ಅಂತರಾಷ್ಟ್ರೀಯ ಖ್ಯಾತಿಯ ವಾಗ್ಮಿ, ಸಾವಿರಾರು ಅಭಿಮಾನಿಗಳನ್ನು ಹೊಂದಿರುವ ಜನಪ್ರಿಯ ಧಾರ್ಮಿಕ ಪ್ರಭಾಷಕ ಉಸ್ತಾದ್ ಸಿರಾಜುದ್ದೀನ್ ಖಾಸಿಮಿ (ಪತ್ತಾನಾಪುರಂ, ಕೇರಳ) ಭೇಟಿ ನೀಡಿ ಸಂಸ್ಥೆಯ ಬೆಳವಣಿಗೆಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪಾಲುದಾರ ಇಕ್ಬಾಲ್ ಬಾಳಿಲ, “ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಸಿರಾಜುದ್ದೀನ್ ಖಾಸಿಮಿ ಉಸ್ತಾದರು ನಮ್ಮ ಸಂಸ್ಥೆಗೆ ಭೇಟಿ ನೀಡಿರುವುದು ನಮಗೆ ಅಪಾರ ಸಂತೋಷದ ವಿಷಯ. ಅವರ ದುಆ ಮತ್ತು ಮಾರ್ಗದರ್ಶನ ಸದಾ ನಮ್ಮೊಂದಿಗೆ ಇರಲಿ” ಎಂದು ಹಾರೈಸಿದರು.
ಬಳಿಕ ಉಸ್ತಾದ್ ಸಿರಾಜುದ್ದೀನ್ ಖಾಸಿಮಿ ಅವರನ್ನು ಕುಂಬ್ರದ ಹಿರಿಯ ಸಮಾಜಮುಖಿ ನಾಯಕ ಅಬ್ದುಲ್ ರಹ್ಮಾನ್ ಹಾಜಿ ಅರ್ಯಡ್ಕ ಅವರು ಶಾಲು ಹೊದಿಸಿ ಗೌರವಿಸಿದರು. ಉಸ್ತಾದರೊಂದಿಗೆ ಆಗಮಿಸಿದ್ದ ಖ್ಯಾತ ವಾಗ್ಮಿ ಅಬ್ರಾರಿ ಉಸ್ತಾದ್ ಅವರನ್ನೂ ಇದೇ ಸಂದರ್ಭದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪಾಲುದಾರ ಮುಕ್ತಾರ್ ಕುಂಬ್ರ, ಉದ್ಯಮಿ ಶರಫುದ್ದೀನ್ ಕುಂಬ್ರ, ಮ್ಯಾನೇಜ್ಮೆಂಟ್ ತಂಡದ ನಿಝಾಮುದ್ದೀನ್ ಬಾಳಿಲ, ಅಶ್ರಫ್ ಸನ್ ಶೖನ್ ಕುಂಬ್ರ ಸೇರಿದಂತೆ ಹಲವಾರು ಗಣ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಹತ್ತನೇ ವರ್ಷದ ಸಂಭ್ರಮದಲ್ಲಿರುವ ಇಂಡಿಯನ್ ಇವೆಂಟ್ ಆ್ಯಂಡ್ ವೆಡ್ಡಿಂಗ್ಸ್ ಸಂಸ್ಥೆಯ ಮುಂದಿನ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಉಸ್ತಾದರು ದುವಾ ನೆರವೇರಿಸಿ ಶುಭ ಹಾರೈಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ