ಮನಾಮ: ಬಹ್ರೇನ್ ಮೇಲಿನ ದಾಳಿಯನ್ನು ಇರಾನ್ ಮತ್ತೆ ಮುಂದುವರಿಸಿದೆ. ಭಾನುವಾರ ಮುಂಜಾನೆ 2:50 ಕ್ಕೆ ಮತ್ತು ನಂತರ ಬೆಳಗ್ಗೆ 6:45 ಕ್ಕೆ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ, ಬಹ್ರೇನ್ನ ಮುಹರ್ರಕ್ ಗವರ್ನರೇಟ್ನಲ್ಲಿರುವ ವಸತಿ ಸಂಕೀರ್ಣವೊಂದು ತೀವ್ರವಾಗಿ ಹಾನಿಗೊಳಗಾಗಿದೆ. ದಾಳಿಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಗೃಹ ಸಚಿವಾಲಯ ಅಧಿಕೃತವಾಗಿ ಖಚಿತಪಡಿಸಿದೆ.
ಇರಾನ್ ಉಡಾವಣೆ ಮಾಡಿದ ಬಹುಪಾಲು ಮಿಸೈಲ್ (ಕ್ಷಿಪಣಿ) ಮತ್ತು ಡ್ರೋನ್ಗಳನ್ನು ಆಕಾಶದಲ್ಲೇ ಹೊಡೆದುರುಳಿಸಲು ಸೇನೆಗೆ ಸಾಧ್ಯವಾಗಿದೆ. ಆದಾಗ್ಯೂ, ಕೆಲವು ಅವಶೇಷಗಳು ಬಿದ್ದಿದ್ದರಿಂದ ಕಟ್ಟಡಕ್ಕೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಸಿವಿಲ್ ಡಿಫೆನ್ಸ್ ಸೇರಿದಂತೆ ಭದ್ರತಾ ಪಡೆಗಳು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದವು. ಗೃಹ ಸಚಿವಾಲಯದ ಅಧಿಕೃತ ‘X’ (ಟ್ವಿಟರ್) ಖಾತೆಯ ಮೂಲಕ ಹಾನಿಗೊಳಗಾದ ಕಟ್ಟಡದ ಚಿತ್ರಗಳ ಸಮೇತ ಈ ಮಾಹಿತಿಯನ್ನು ಹೊರಹಾಕಲಾಗಿದೆ.
ಈ ದಾಳಿಯನ್ನು ಬಹ್ರೇನ್ ವಿದೇಶಾಂಗ ಸಚಿವಾಲಯವು ತೀವ್ರವಾಗಿ ಖಂಡಿಸಿದೆ. ಶಾಂತಿಯುತ ವಾತಾವರಣವನ್ನು ಕದಡುವ ಇರಾನ್ನ ಇಂತಹ ನಿರಂತರ ದಾಳಿಗಳ ವಿರುದ್ಧ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಅತ್ಯಗತ್ಯ ಎಂದು ಸಚಿವಾಲಯವು ಪ್ರಕಟಣೆಯಲ್ಲಿ ಒತ್ತಾಯಿಸಿದೆ. ದೇಶದ ಭದ್ರತೆ ಮತ್ತು ನಾಗರಿಕರ ಜೀವ ರಕ್ಷಣೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದೂ ಸಚಿವಾಲಯ ಸ್ಪಷ್ಟಪಡಿಸಿದೆ.
















ಇನ್ನಷ್ಟು ಸುದ್ದಿಗಳು
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ