janadhvani

Kannada Online News Paper

ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ತಹ್ಲೀಲ್ ಸಮರ್ಪಣೆ, ತ್ವಾಖಾ ಉಸ್ತಾದ್ ಅನುಸ್ಮರಣೆ

ಮಂಗಳೂರು: ಇಲ್ಲಿನ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಇತ್ತೀಚೆಗೆ ನಿಧನರಾದ ಪ್ರಮುಖ ಧಾರ್ಮಿಕ ಮುಖಂಡ ಹಾಜಿ ಶೈಖುನಾ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಅನುಸ್ಮರಣಾರ್ಥ ತಹ್ಲೀಲ್ ಸಮರ್ಪಣೆ ಹಾಗೂ ಮಾಸಿಕ ಸಭೆಯು ಕಳೆದ ಜೂನ್ 27 ರಂದು ಟ್ರಸ್ಟ್ ಕಚೇರಿಯಲ್ಲಿ ಭಕ್ತಿಭಾವದೊಂದಿಗೆ ಜರುಗಿತು.

ಮಂಗಳೂರು ಕುದ್ರೋಳಿಯ ನಡುಪಲ್ಲಿ ಜುಮಾ ಮಸ್ಜಿದ್ ಖತೀಬರಾದ ರಿಯಾಜ್ ಫೈಝಿ ಕುಕ್ಕಾಜೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಅನುಸ್ಮರಣಾ ಭಾಷಣ ಮಾಡಿದರು. ಮರ್ಹೂಮ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಸಲ್ಲಿಸಿದ ಸುದೀರ್ಘ ಧಾರ್ಮಿಕ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಸ್ಮರಿಸಿದ ಅವರು, ಸಮಾಜಕ್ಕೆ ಅವರು ನೀಡಿದ ಕೊಡುಗೆ ಮತ್ತು ಆದರ್ಶಗಳು ಸದಾ ಅನುಕರಣೀಯ ಎಂದರು. ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜದ ಐಕ್ಯತೆ, ಸೇವಾ ಮನೋಭಾವ ಹಾಗೂ ಧಾರ್ಮಿಕ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಪವಿತ್ರ ಕುರ್‌ಆನ್ ಪಾರಾಯಣ, ತಹ್ಲೀಲ್ ಹಾಗೂ ಮರ್ಹೂಮರ ಪರವಾಗಿ ವಿಶೇಷ ದುಆ ನೆರವೇರಿಸಲಾಯಿತು. ಸಭೆಯ ಕೊನೆಯಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ಹಣ್ಣುಹಂಪಲು ಹಾಗೂ ಉಪಹಾರ ವಿತರಿಸಲಾಯಿತು. ಸಭೆಯಲ್ಲಿ ಟ್ರಸ್ಟ್‌ನ ಪ್ರಮುಖ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು. ಸಮಸ್ತ ಕಾರ್ಯಕ್ರಮವು ಅತ್ಯಂತ ಭಕ್ತಿಪೂರ್ವಕ ವಾತಾವರಣದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಇದನ್ನೂ ಓದಿರಿ...