ಮಂಗಳೂರು: ಇಲ್ಲಿನ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಇತ್ತೀಚೆಗೆ ನಿಧನರಾದ ಪ್ರಮುಖ ಧಾರ್ಮಿಕ ಮುಖಂಡ ಹಾಜಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಅನುಸ್ಮರಣಾರ್ಥ ತಹ್ಲೀಲ್ ಸಮರ್ಪಣೆ ಹಾಗೂ ಮಾಸಿಕ ಸಭೆಯು ಕಳೆದ ಜೂನ್ 27 ರಂದು ಟ್ರಸ್ಟ್ ಕಚೇರಿಯಲ್ಲಿ ಭಕ್ತಿಭಾವದೊಂದಿಗೆ ಜರುಗಿತು.
ಮಂಗಳೂರು ಕುದ್ರೋಳಿಯ ನಡುಪಲ್ಲಿ ಜುಮಾ ಮಸ್ಜಿದ್ ಖತೀಬರಾದ ರಿಯಾಜ್ ಫೈಝಿ ಕುಕ್ಕಾಜೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಅನುಸ್ಮರಣಾ ಭಾಷಣ ಮಾಡಿದರು. ಮರ್ಹೂಮ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಸಲ್ಲಿಸಿದ ಸುದೀರ್ಘ ಧಾರ್ಮಿಕ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಸ್ಮರಿಸಿದ ಅವರು, ಸಮಾಜಕ್ಕೆ ಅವರು ನೀಡಿದ ಕೊಡುಗೆ ಮತ್ತು ಆದರ್ಶಗಳು ಸದಾ ಅನುಕರಣೀಯ ಎಂದರು. ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜದ ಐಕ್ಯತೆ, ಸೇವಾ ಮನೋಭಾವ ಹಾಗೂ ಧಾರ್ಮಿಕ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಪವಿತ್ರ ಕುರ್ಆನ್ ಪಾರಾಯಣ, ತಹ್ಲೀಲ್ ಹಾಗೂ ಮರ್ಹೂಮರ ಪರವಾಗಿ ವಿಶೇಷ ದುಆ ನೆರವೇರಿಸಲಾಯಿತು. ಸಭೆಯ ಕೊನೆಯಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ಹಣ್ಣುಹಂಪಲು ಹಾಗೂ ಉಪಹಾರ ವಿತರಿಸಲಾಯಿತು. ಸಭೆಯಲ್ಲಿ ಟ್ರಸ್ಟ್ನ ಪ್ರಮುಖ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು. ಸಮಸ್ತ ಕಾರ್ಯಕ್ರಮವು ಅತ್ಯಂತ ಭಕ್ತಿಪೂರ್ವಕ ವಾತಾವರಣದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು.
















ಇನ್ನಷ್ಟು ಸುದ್ದಿಗಳು
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ