ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಾದ್ಯಂತ ತುರ್ತು ಕ್ರಮಗಳನ್ನು ಕೈಗೊಂಡಿದೆ.
ದ.ಕ. ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್.ವಿ. ಅವರು ಹೊರಡಿಸಿರುವ ಪ್ರಕಟಣೆಯ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ:
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
- ಜುಲೈ 08, 2026ರ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ (12ನೇ ತರಗತಿಯವರೆಗೆ) ವಸತಿ ಶಾಲೆ/ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
- ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ) ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಕಟ್ಟುನಿಟ್ಟಿನ ಸೂಚನೆಗಳು
- ನೀರಿರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು.
- ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು.
- ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.
ಅಧಿಕಾರಿಗಳಿಗೆ ಕಡ್ದಾಯ ಆದೇಶ
- ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು.
- ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
- ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಳ್ಳಬೇಕು.
ತುರ್ತು ಸಹಾಯವಾಣಿ ಸಂಖ್ಯೆಗಳು
ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
- ಟೋಲ್ ಫ್ರೀ ಸಂಖ್ಯೆ: 1077
- ದೂರವಾಣಿ ಸಂಖ್ಯೆ: 0824-2442590















ಇನ್ನಷ್ಟು ಸುದ್ದಿಗಳು
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಸಾಹಿತ್ಯೋತ್ಸವ- ಸ್ವಾಗತ ಸಮಿತಿ ರಚನೆ
ಕಾಂತಪುರಂ ಉಸ್ತಾದ್ ಹೆಸರಿನಲ್ಲಿ ನಕಲಿ ಪೋಸ್ಟ್ ಮತ್ತು ವಿಡಿಯೋ- ಸೋಶಿಯಲ್ ಮೀಡಿಯಾ ವಿರುದ್ಧ ದೂರು ದಾಖಲು
ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನಿಂದ ತಹ್ಲೀಲ್ ಸಮರ್ಪಣೆ, ತ್ವಾಖಾ ಉಸ್ತಾದ್ ಅನುಸ್ಮರಣೆ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
ಸೆಂಟಿನರಿ ಸೆನೆಟ್ ಹಾಗೂ ನಾಟು ದರ್ಸ್ ಉದ್ಘಾಟನೆ: ಸ್ಥಳೀಯ ಸ್ವಾಗತ ಸಮಿತಿ ರಚನೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ಡಿಕೆಯಸ್ಸಿ ಝೈದಿ ಘಟಕದ ವಾರ್ಷಿಕ ಮಹಾಸಭೆ – ನೂತನ ಪದಾಧಿಕಾರಿಗಳ ಆಯ್ಕೆ