ಮಂಗಳೂರು: ಇಲ್ಲಿನ ಹೊರವಲಯದ ಕೃಷ್ಣಾಪುರದಲ್ಲಿ ಮದ್ರಸ ಮುಅಲ್ಲಿಮರೊಬ್ಬರ (ಧಾರ್ಮಿಕ ಶಿಕ್ಷಕರು) ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್ಜೆಎಂ) ದಕ್ಷಿಣ ಕನ್ನಡ ಸೌತ್ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ. ಈ ಕುರಿತು ಸಮಿತಿಯು ವಿಶೇಷ ಖಂಡನಾ ನಿರ್ಣಯವನ್ನು ಅಂಗೀಕರಿಸಿದೆ.
ಸಮಾಜಕ್ಕೆ ತಪ್ಪು ಸಂದೇಶ:
ಧಾರ್ಮಿಕ ಶಿಕ್ಷಣದ ಮೂಲಕ ಮಕ್ಕಳಿಗೆ ಸಂಸ್ಕಾರ ಹಾಗೂ ಒಳಿತನ್ನು ಬೋಧಿಸುವ ಮುಅಲ್ಲಿಮರು ಸಮಾಜದ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಾಗಿದ್ದಾರೆ. ಉತ್ತಮ ಮತ್ತು ಆರೋಗ್ಯಕರ ಸಮಾಜದ ನಿರ್ಮಾಣದಲ್ಲಿ ಅವರ ಪಾತ್ರ ಅಪಾರವಾಗಿದೆ. ಇಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರನ್ನು ಬಹಿರಂಗವಾಗಿ ತೆಗಳುವುದು ಹಾಗೂ ಅವರ ಮೇಲೆ ಹಲ್ಲೆ ನಡೆಸುವುದು ಅಕ್ಷಮ್ಯ ಅಪರಾಧವಾಗಿದೆ. ಈ ರೀತಿಯ ಘಟನೆಗಳು ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದಲ್ಲದೆ, ಇಡೀ ಸಮಾಜದಲ್ಲಿ ದುಷ್ಪರಿಣಾಮ ಬೀರಲಿದೆ ಎಂದು ಸಮಿತಿ ಆತಂಕ ವ್ಯಕ್ತಪಡಿಸಿದೆ.
ಸಮಿತಿಯ ಎಚ್ಚರಿಕೆ:
ಪ್ರಸ್ತುತ ದಿನಗಳಲ್ಲಿ ಮುಅಲ್ಲಿಮರು ಅತ್ಯಂತ ಕಡಿಮೆ ಸಂಬಳದಲ್ಲೇ ತೃಪ್ತಿಪಟ್ಟುಕೊಂಡು ಧಾರ್ಮಿಕ ಸೇವೆಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಹಲವರು ಈ ಕ್ಷೇತ್ರದಿಂದ ಹಿಂದೆ ಸರಿಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಸಮಾಜದಲ್ಲಿ ಕನಿಷ್ಠ ಗೌರವ ಹಾಗೂ ರಕ್ಷಣೆಯೂ ಸಿಗದಿದ್ದರೆ, ಅವರು ಈ ಕ್ಷೇತ್ರದಿಂದ ಸಂಪೂರ್ಣವಾಗಿ ಹೊರಹೋಗುವ ಅಪಾಯವಿದೆ. ಮುಅಲ್ಲಿಮರು ಈ ಕ್ಷೇತ್ರದಿಂದ ದೂರವಾದರೆ ಸಮಾಜವು ಭವಿಷ್ಯದಲ್ಲಿ ಇದಕ್ಕಾಗಿ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಸಮಿತಿಯು ಸಮಾಜಕ್ಕೆ ಎಚ್ಚರಿಕೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ