ಮಂಗಳೂರು : ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ನಡೆಯುತ್ತಿರುವ ಯುದ್ಧದಿಂದಾಗಿ ಗಲ್ಫ್ ರಾಷ್ಟ್ರಗಳಲ್ಲಿರುವ ಅಸಂಖ್ಯಾತ ಅನಿವಾಸಿ ಮಿತ್ರರು ಆತಂಕದಲ್ಲಿದ್ದು ವ್ಯಾಪಾರ ವಹಿವಾಟುಗಳು ಕೂಡ ಗಣನೀಯವಾಗಿ ಕುಸಿದಿದೆ. ಅನಿವಾಸಿಗಳು ನಮ್ಮ ಕುಟುಂಬಗಳ ಉಸಿರಾಗಿದ್ದು, ಕುಟುಂಬದ ಭಾರ ಹೊತ್ತು ಕಡಲು ದಾಟಿ ವಿದೇಶದ ನೆಲದಲ್ಲಿ ಬೆವರು ಸುರಿಸುವವರು. ಕುಟುಂಬದ ಜೊತೆಗೆ ನಾಡಿನ ಧಾರ್ಮಿಕ ಚಟುವಟಿಕೆಗಳು ಮಸೀದಿ ಮದ್ರಸಾಗಳು , ಹತ್ತು ಹಲವು ಚಾರಿಟಿಗಳು ಹಾಗೂ ಸಂಘಸಂಸ್ಥೆಗಳ ಬೆನ್ನೆಲುಬಾಗಿ ನಿಂತಿದ್ದಾರೆ. ಆದ್ದರಿಂದಲೇ ಅವರ ಸಂಕಷ್ಟದಲ್ಲಿ ಭಾಗಿಯಾಗಿ ಅವರಿಗಾಗಿ ಪ್ರಾರ್ಥಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯಕಾರಿಣಿ ಸಭೆ ಅಭಿಪ್ರಾಯ ಪಟ್ಟಿತು.
ನಮ್ಮ ಅನಿವಾಸಿ ಮಿತ್ರರಿಗಾಗಿ ಇದೇ ಬರುವ ಜುಲೈ 24 ಶುಕ್ರವಾರದಂದು ಎಲ್ಲಾ ಯೂನಿಟ್ ಕೇಂದ್ರಗಳಲ್ಲಿ ನಾರಿಯತುಸ್ಸಲಾತ್ ಹಾಗೂ ದುಆಉಲ್ ಖರ್ಬ್ ಮಜ್ಲಿಸ್ ನಡೆಸಿ ವಿಶೇಷ ಪ್ರಾರ್ಥನೆ ಮಾಡಬೇಕೆಂದು ಎಸ್ಸೆಸ್ಸೆಫ್ ಕರೆ ನೀಡಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ, ಫಿನಾನ್ಸ್ ಕಾರ್ಯದರ್ಶಿ ಅನ್ವರ್ ಅಸ್ಸಅದಿ ಸಹಿತ ಎಸ್ಸೆಸ್ಸೆಫ್ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸಭೆಯಲ್ಲಿ ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ