ಮಂಗಳೂರು : ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ನಡೆಯುತ್ತಿರುವ ಯುದ್ಧದಿಂದಾಗಿ ಗಲ್ಫ್ ರಾಷ್ಟ್ರಗಳಲ್ಲಿರುವ ಅಸಂಖ್ಯಾತ ಅನಿವಾಸಿ ಮಿತ್ರರು ಆತಂಕದಲ್ಲಿದ್ದು ವ್ಯಾಪಾರ ವಹಿವಾಟುಗಳು ಕೂಡ ಗಣನೀಯವಾಗಿ ಕುಸಿದಿದೆ. ಅನಿವಾಸಿಗಳು ನಮ್ಮ ಕುಟುಂಬಗಳ ಉಸಿರಾಗಿದ್ದು, ಕುಟುಂಬದ ಭಾರ ಹೊತ್ತು ಕಡಲು ದಾಟಿ ವಿದೇಶದ ನೆಲದಲ್ಲಿ ಬೆವರು ಸುರಿಸುವವರು. ಕುಟುಂಬದ ಜೊತೆಗೆ ನಾಡಿನ ಧಾರ್ಮಿಕ ಚಟುವಟಿಕೆಗಳು ಮಸೀದಿ ಮದ್ರಸಾಗಳು , ಹತ್ತು ಹಲವು ಚಾರಿಟಿಗಳು ಹಾಗೂ ಸಂಘಸಂಸ್ಥೆಗಳ ಬೆನ್ನೆಲುಬಾಗಿ ನಿಂತಿದ್ದಾರೆ. ಆದ್ದರಿಂದಲೇ ಅವರ ಸಂಕಷ್ಟದಲ್ಲಿ ಭಾಗಿಯಾಗಿ ಅವರಿಗಾಗಿ ಪ್ರಾರ್ಥಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯಕಾರಿಣಿ ಸಭೆ ಅಭಿಪ್ರಾಯ ಪಟ್ಟಿತು.
ನಮ್ಮ ಅನಿವಾಸಿ ಮಿತ್ರರಿಗಾಗಿ ಇದೇ ಬರುವ ಜುಲೈ 24 ಶುಕ್ರವಾರದಂದು ಎಲ್ಲಾ ಯೂನಿಟ್ ಕೇಂದ್ರಗಳಲ್ಲಿ ನಾರಿಯತುಸ್ಸಲಾತ್ ಹಾಗೂ ದುಆಉಲ್ ಖರ್ಬ್ ಮಜ್ಲಿಸ್ ನಡೆಸಿ ವಿಶೇಷ ಪ್ರಾರ್ಥನೆ ಮಾಡಬೇಕೆಂದು ಎಸ್ಸೆಸ್ಸೆಫ್ ಕರೆ ನೀಡಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ, ಫಿನಾನ್ಸ್ ಕಾರ್ಯದರ್ಶಿ ಅನ್ವರ್ ಅಸ್ಸಅದಿ ಸಹಿತ ಎಸ್ಸೆಸ್ಸೆಫ್ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸಭೆಯಲ್ಲಿ ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ