ದಮ್ಮಾಮ್: ಹೌಸ್ ಡ್ರೈವರ್ ಕೆಲಸಕ್ಕಾಗಿ ಸುಮಾರು 15 ದಿನಗಳ ಹಿಂದೆ ದಮ್ಮಾಮ್ ಅಲ್ ಖೋಬರ್ ವ್ಯಾಪ್ತಿಗೆ ಆಗಮಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಝಾಕ್ ಎಂಬುವವರು ಮೆಡಿಕಲ್ ಸಮಸ್ಯೆಯಿಂದಾಗಿ ಕಫೀಲ್ ರಿಂದ ರಿಜೆಕ್ಟ್ ಆಗಿ ಸಂಕಷ್ಟಕ್ಕೆ ಸಿಲುಕಿದ್ದರು.
ವಿಷಯವು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಗಮನಕ್ಕೆ ಬಂದ ಕೂಡಲೇ, ಕರ್ನಾಟಕ ಕಲ್ಚರ್ ಫೌಂಡೇಶನ್ (ಕೆ ಸಿ ಎಫ್ )ದಮ್ಮಾಮ್ ಝೋನ್ ನಾಯಕರಾದ ಮುಹಮ್ಮದ್ ಮಲೆಬೆಟ್ಟು ಅವರ ನೇತೃತ್ವದ ತಂಡವು ತಕ್ಷಣ ಕಾರ್ಯಾಚರಣೆ ಆರಂಭಿಸಿತು. ಕಫೀಲ್ ರವರೊಂದಿಗೆ ನಿರಂತರ ಮಾತುಕತೆ ನಡೆಸಿ, ಕಫೀಲ್ ಕೇಳಿದ ಹಣವನ್ನು ಇವರ ಕುಟುಂಬದ ಸಹಕಾರದೊಂದಿಗೆ ನೀಡಿ ಎಕ್ಸಿಟ್ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ಬಳಿಕ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿ ಇವರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕಳುಹಿಸಿಕೊಡುವಲ್ಲಿ ಕೆಸಿಎಫ್ ತಂಡವು ಯಶಸ್ವಿಯಾಯಿತು.
ಈ ಅವಧಿಯಲ್ಲಿ ರೂಮಿನಲ್ಲಿ ಕಷ್ಟದಲ್ಲಿದ್ದಾಗ ಊಟ-ವಸತಿಯ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ನೆರವನ್ನು ಒದಗಿಸಲಾಯಿತು. ಈ ಮಾನವೀಯ ಕಾರ್ಯದಲ್ಲಿ ಸಹಕರಿಸಿದ ಎಲ್ಲಾ ಹಿತೈಷಿಗಳು, ಕೆಸಿಎಫ್ ರಾಷ್ಟ್ರೀಯ ಸಮಿತಿ, ಖೋಬರ್ ಸೆಕ್ಟರ್ ಹಾಗೂ ಮುಹಮ್ಮದ್ ಮಲೆಬೆಟ್ಟು ತಂಡಕ್ಕೆ ಅಭಿನಂದನೆಗಳು.
ಕೆಸಿಎಫ್ ದಮ್ಮಾಮ್ ಝೋನ್
ಖೋಬರ್ ಸೆಕ್ಟರ್
















ಇನ್ನಷ್ಟು ಸುದ್ದಿಗಳು
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ