janadhvani

Kannada Online News Paper

ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ

ವಿದ್ಯಾರ್ಥಿಗಳ ಸೃಜನಶೀಲತೆ, ಬೌದ್ಧಿಕ ಸಾಮರ್ಥ್ಯ, ನಾಯಕತ್ವ ಗುಣಗಳು ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸಾಹಿತ್ಯೋತ್ಸವವನ್ನು ಆಯೋಜಿಸಲಾಗಿದೆ.

ಉಡುಪಿ : ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ದೇಶಾದ್ಯಂತ ಆಯೋಜಿಸುತ್ತಿರುವ ಸಾಹಿತ್ಯೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ–2026 ಆಗಸ್ಟ್ 1 ಮತ್ತು 2ರಂದು ಕಾರ್ಕಳ ಬಂಗ್ಲ ಗುಡ್ಡೆ ಇಲ್ಲಿನ ತ್ವಯಿಭಾ ಗಾರ್ಡನ್ ನಲ್ಲಿ ಜರುಗಲಿದೆ.

ಈ ಪ್ರತಿಭಾ ಸಂಗಮದಲ್ಲಿ ಜಿಲ್ಲೆಯ ಐದು ಡಿವಿಷನ್‌ಗಳಿಂದ 450ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಸಾಹಿತ್ಯ, ಭಾಷಣ, ವಾಕ್ ಚಾತುರ್ಯ, ಬರವಣಿಗೆ, ಕಲೆ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲಿದ್ದಾರೆ.

ವಿದ್ಯಾರ್ಥಿಗಳ ಸೃಜನಶೀಲತೆ, ಬೌದ್ಧಿಕ ಸಾಮರ್ಥ್ಯ, ನಾಯಕತ್ವ ಗುಣಗಳು ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸಾಹಿತ್ಯೋತ್ಸವವನ್ನು ಆಯೋಜಿಸಲಾಗಿದೆ.

ಆಗಸ್ಟ್ 2ರಂದು ಸಂಜೆ ಸಮಾರೋಪ ಸಮಾರಂಭ ಜರುಗಲಿದೆ ಎಂದು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಸಾಹಿತ್ಯೋತ್ಸವ ಸಮಿತಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿರಿ...