janadhvani

Kannada Online News Paper

ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್‌ಲೈನ್ ಸಂವಾದ ಕಾರ್ಯಕ್ರಮ

ಸೌದಿ ಅರೇಬಿಯಾ: ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 15ರ ಶನಿವಾರದಂದು ರಾತ್ರಿ ಭಾರತೀಯ ಕಾಲಮಾನ 10:00 ಗಂಟೆಗೆ ಆನ್‌ಲೈನ್ ಸಂವಾದ ಕಾರ್ಯಕ್ರಮ ನಡೆಯಲಿದೆ.

“ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದಲ್ಲಿ ಯುವ ಸಮುದಾಯದ ಪಾತ್ರ” ಎಂಬ ವಿಷಯದಲ್ಲಿ ನಡೆಯುವ ಈ ಸಂವಾದದಲ್ಲಿ ರಾಜ್ಯದ ಹಲವು ಗಣ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮವನ್ನು ಕೆ.ಸಿ.ಎಫ್. ಅಂತಾರಾಷ್ಟ್ರೀಯ ಸಮಿತಿ

ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಹಾಜಿ ಬರಕ ಉಧ್ಘಾಟಿಸಲಿದ್ದಾರೆ,

ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಹೈಕೋರ್ಟ್ ವಕೀಲರಾದ ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಎಸ್.ವೈ.ಎಸ್. (SYS) ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಿದ್ಧೀಕ್ ಮೊಂಟುಗೋಳಿ ಅವರು ಪ್ಯಾನೆಲಿಸ್ಟ್‌ಗಳಾಗಿ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.

ಕೆ.ಸಿ.ಎಫ್. ಅಂತಾರಾಷ್ಟ್ರೀಯ ಸಮಿತಿ ಪ್ಲಾನಿಂಗ್ ಬೋರ್ಡ್ ಚೇರ್ಮನ್ ಡಿ.ಪಿ. ಯೂಸುಫ್ ಸಖಾಫಿ ಬೈತಾರ್ ಅವರು ಚರ್ಚೆಯ ಮಾಡರೇಟರ್ ಆಗಿ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ

ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಲ

(ಅಧ್ಯಕ್ಷರು, ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ)

ಅಬೂಬಕ್ಕರ್ ಹಾಜಿ ರೈಸ್ಕೋ

(ಕೋಶಾಧಿಕಾರಿ, ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ )

ಅತಿಥಿಗಳಾಗಿ ಭಾಗವಹಿಸಲಿದ್ದಾರೆ

ಎಂದು ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿರಿ...