ಬಳಕುಂಜೆ: ಇಲ್ಲಿನ ಗ್ರಾಮಸ್ಥರ ಒಗ್ಗಟ್ಟು ಹಾಗೂ ಬಾಂಧವ್ಯಕ್ಕೆ ಸಾಕ್ಷಿಯಾಗಿ, ಮುಸ್ಲಿಂ ಬಾಂಧವರ ಈದ್ ಮಿಲಾದ್ ಹಬ್ಬದ ಅಂಗವಾಗಿ ಹಿಂದೂ, ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಸಮುದಾಯದವರು ಒಂದಾಗಿ ಸೇರಿ ಸಾಮರಸ್ಯದ ಸೌಹಾರ್ದ ಸಭೆಯನ್ನು ದಿನಾಂಕ 25-08-2026ರ ಮಂಗಳವಾರದಂದು ಯಶಸ್ವಿಯಾಗಿ ಆಯೋಜಿಸಿದರು.

ಗ್ರಾಮದ ಶ್ರೀ ವಿಠೋಭ ರಖುಮಾಯಿ ಭಜನಾ ಮಂದಿರದಲ್ಲಿ ಜರುಗಿದ ಸೌಹಾರ್ದ ಸಭೆಯಲ್ಲಿ, ಬಳಕುಂಜೆ ಸಂತ ಪೌಲರ ದೇವಾಲಯದ ಧರ್ಮಗುರುಗಳಾದ ವಂ. ಪಾವ್ಲ್ ಸಿಕ್ವೇರಾ ಅವರು ಮಾತನಾಡಿ, ಬಳಕುಂಜೆ ಗ್ರಾಮದಲ್ಲಿ ನೆಲೆಯಾಗಿರುವ ಪರಸ್ಪರ ಪ್ರೀತಿ, ಸಾಮರಸ್ಯ ಹಾಗೂ ಒಗ್ಗಟ್ಟನ್ನು ಶ್ಲಾಘಿಸಿದರು.
“ನಮ್ಮೆಲ್ಲರ ನರಗಳಲ್ಲಿ ಹರಿಯುವ ರಕ್ತ ಒಂದೇ, ನಾವು ಕುಡಿಯುವ ಜಲ ಒಂದೇ ಹಾಗೂ ಉಸಿರಾಡುವ ಗಾಳಿಯೂ ಒಂದೇ ಆಗಿದೆ. ಹಾಗಿರುವಾಗ ನಮ್ಮಲ್ಲಿ ಜಾತಿ-ಮತದ ಭೇದಭಾವದ ಮಾತುಗಳಿಗೆ ಆಸ್ಪದವೇ ಇಲ್ಲ. ನಮ್ಮ ಈ ಗ್ರಾಮವೇ ಇದಕ್ಕೆ ಜೀವಂತ ಉದಾಹರಣೆಯಾಗಿದೆ,” ಎಂದು ಅವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಮಸೀದಿಯ ಧರ್ಮಗುರುಗಳಾದ ನೌಶಾದ್ ಸಅದಿ, ನೆಲ್ಸನ್ ಲೋಬೋ, ಮಮತಾ ಡಿ. ಪೂಂಜಾ ಹಾಗೂ ಡಾ. ಫ್ರೀಡಾ ರೋಡ್ರಿಗಸ್ ಅವರುಗಳು ಸಂದರ್ಭೋಚಿತವಾಗಿ ಮಾತನಾಡಿ ಹಬ್ಬದ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಮೌಲಾನಾ ಮುಸ್ತಫಾ ಸಖಾಫಿ, ಮಲ್ಲಿಕಾ ಶೆಟ್ಟಿ, ರೋಷನ್ ಡಿಸೋಜ, ಪ್ರಸಾದ್ ಶೆಟ್ಟಿ, ವನಿತಾ, ಮುಹಮ್ಮದಾಲಿ, ಅಬ್ದುಲ್ ಖಾದರ್, ಅಬ್ದುರ್ರಹ್ಮಾನ್ ಹಾಜಿ ಮತ್ತು ಇಸ್ಮಾಯಿಲ್ (ಇಚ್ಛಾಲಿ) ಉಪಸ್ಥಿತರಿದ್ದರು.
ಶಂಸುದ್ದೀನ್ ಬಳಕುಂಜೆ ಪ್ರಸ್ತಾವಿಕವಾಗಿ ಎಲ್ಲರನ್ನೂ ಸ್ವಾಗತಿಸಿದರು. ದಿನಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರೆ, ಫಾರೂಕ್ ಹಾಜಿ ಕರ್ನಿರೆ ಕೊನೆಯಲ್ಲಿ ಧನ್ಯವಾದ ಸಮರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ