janadhvani

Kannada Online News Paper

SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ನೋಟೀಸ್ ತಲುಪಿ ಆತಂಕಕ್ಕೊಳಗಾಗಿರುವ ಅನಿವಾಸಿ ಭಾರತೀಯರಿಗೆ (NRI) ಶೀಘ್ರವೇ ಸೂಕ್ತ ಪರಿಹಾರ ದೊರೆಯಲಿದೆ ಎಂದು SKSSF ಕರ್ನಾಟಕ ರಾಜ್ಯ ಉಪಾಧ್ಯಕ್ಷ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ.

ಈ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಯು. ಟಿ. ಖಾದರ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದೇಶದಲ್ಲಿರುವ ಕನ್ನಡಿಗರು ಮತ್ತು ಭಾರತೀಯರು ಎದುರಿಸುತ್ತಿರುವ ಗೊಂದಲಕ್ಕೆ ಶೀಘ್ರದಲ್ಲೇ ಮುಕ್ತಿ ಸಿಗಲಿದೆ ಎಂದಿದ್ದಾರೆ.

ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ಅನುಕೂಲವಾಗುವಂತೆ ಚುನಾವಣಾ ಆಯೋಗವು ಸರಳವಾದ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವ ಸಾಧ್ಯತೆಯಿದೆ. ಅನಿವಾಸಿ ಭಾರತೀಯರು ತಮ್ಮ ಪಾಸ್‌ಪೋರ್ಟ್ ಹಾಗೂ ಅಗತ್ಯ ದಾಖಲಾತಿಗಳನ್ನು ಒದಗಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅವಕಾಶ ನೀಡಲಾಗುವುದು. ಈ ಕುರಿತು ಮುಂದಿನ ಎರಡೇ ದಿನಗಳಲ್ಲಿ ಅಧಿಕೃತ ಆದೇಶ ಹೊರಬರುವ ನಿರೀಕ್ಷೆಯಿದೆ ಎಂದು ಯು. ಟಿ. ಖಾದರ್ ಭರವಸೆ ನೀಡಿದ್ದಾರೆ.

ಆದ್ದರಿಂದ ವಿದೇಶದಲ್ಲಿರುವ ಭಾರತೀಯರು ಹಾಗೂ ಅವರ ಕುಟುಂಬಸ್ಥರು ಯಾವುದೇ ಕಾರಣಕ್ಕೂ ಗಾಬರಿಯಾಗುವ ಅಥವಾ ಗೊಂದಲಕ್ಕೊಳಗಾಗುವ ಅಗತ್ಯವಿಲ್ಲ ಎಂದು ಇಕ್ಬಾಲ್ ಬಾಳಿಲ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿರಿ...