ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ ಫೆಡರೇಷನ್ ಎಸ್ಎಸ್ಎಫ್ ಬಂಟ್ವಾಳ ಡಿವಿಷನ್ ವತಿಯಿಂದ ಬೃಹತ್ ರಕ್ತದಾನ ಶಿಬಿರವು 15-07-2018ರಂದು ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ರಶೀದ್ ವಗ್ಗ ಇವರ ಅಧ್ಯಕ್ಷತೆಯಲ್ಲಿ ಬಿ.ಸಿ. ರೋಡಿನ ಸ್ಪರ್ಶಾ ಹಾಲಿನಲ್ಲಿ ನಡೆಯಲಿದೆ.
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಎಸ್.ಪಿ ಹಂಝ ಸಖಾಫಿ ಉಸ್ತಾದರು ಉದ್ಘಾಟನೆ ಮಾಡಲಿದ್ದು, ಎಸ್ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಇವರು ಸಂದೇಶ ಭಾಷಣ ಮಾಡಲಿದ್ದಾರೆ.
ಬೆಳಿಗ್ಗೆ 11.30ಕ್ಕೆ ಸರಿಯಾಗಿ ಬಂಟ್ವಾಳ ಡಿವಿಷನ್ ವ್ಯಾಪ್ತಿಯ ರೈಟ್ ಟೀಂ ಕಾರ್ಯಕರ್ತರ ಸ್ನೇಹಕೂಟ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಎನ್ ಕೆ ಎಂ ಶಾಫಿ ಸಅದಿ ಬೆಂಗಳೂರು, ಜಿ.ಎಂ ಕಾಮಿಲ್ ಸಖಾಫಿ, ಯುಟಿ ಖಾದರ್, ರಾಜೇಶ್ ನಾಯ್ಕ್, ರಮಾನಾಥ ರೈ ಸಹಿತ ಹಲವು ಧಾರ್ಮಿಕ ರಾಜಕೀಯ ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಮಾದ್ಯಮ ಕಾರ್ಯದರ್ಶಿ ಹಾರಿಸ್ ಪೆರಿಯಪಾದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.