ಬೆಂಗಳೂರು: (ಜನಧ್ವನಿ ವಾರ್ತೆ) ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಸರಕಾರ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಡಗು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಕಳೆದ ಸರಕಾರ ಹೇಳಿಕೊಂಡಿತ್ತು. ನೂತನ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಈ ವರೆಗೆ ವಿದ್ಯಾರ್ಥಿಗಳ ಬಸ್ ಪಾಸ್ ಬಗ್ಗೆ ಸರಕಾರವು ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ. ಸಂಬಂಧಪಟ್ಟ ಸಚಿವರು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ಕೊಡುತ್ತಿರುವುದು ಸುದ್ದಿಯಾಗುತ್ತಿದೆ. ಉಚಿತ ಬಸ್ ಪಾಸ್ ದೊರೆಯಲಿದೆ ಎಂಬ ಭರವಸೆಯಲ್ಲಿ ಹಲವು ವಿದ್ಯಾರ್ಥಿಗಳು ಬಸ್ ಪಾಸ್ ಮಾಡಿಕೊಳ್ಳದೇ ದಿನಂಪ್ರತಿ ಟಿಕೆಟ್ ಪಡ್ಕೊಂಡು ಪ್ರಯಾಣಿಸುತ್ತಿದ್ದಾರೆ.
ವಿದ್ಯಾರ್ಥಿಗಳ ಬಸ್ ಪಾಸ್ ವಿಷಯದಲ್ಲಿ ರಾಜಕೀಯ ಮಾಡುವುದು ಕೂಡ ಸರಿಯಲ್ಲ. ಶಾಲಾ ಕಾಲೇಜುಗಳನ್ನು ಬಂದ್ ಮಾಡಿಸುವುದು ಕೂಡ ಉಚಿತವಲ್ಲ. ಬಂದ್ ಮೂಲಕ ಶಾಲಾ ಕಾಲೇಜುಗಳಲ್ಲಿ ರಾಜಕೀಯ ಬಿತ್ತಲು ಯತ್ನಿಸುವವರ ಬಗ್ಗೆ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ. ಅಂತಹ ರಾಜಕೀಯ ದುರುದ್ದೇಶಿತ ಬಂದ್ ಗಳು ನಡೆಯುವ ಮುನ್ನ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಇಸ್ಮಾಈಲ್ ಸಖಾಫಿ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ