ರಿಯಾದ್: ಸಾಮಾಜಿಕ ಮಾಧ್ಯಮಗಳಲ್ಲಿ ಪುರಾವೆ ರಹಿತ ವರದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೌದಿ ಪಬ್ಲಿಕ್ ಪ್ರಾಸಿಕ್ಯೂಷನ್ ಹೇಳಿದೆ.
ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳನ್ನು ಹರಡುವ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಆಡಳಿತಗಾರರು ಮತ್ತು ಉನ್ನತ ಅಧಿಕಾರಿಗಳು ಹೇಳಿಕೆ ನೀಡಿರುವುದಾಗಿ ನಕಲಿ ಸಂದೇಶಗಳನ್ನು ರವಾನಿಸಲಾಗುವ ಹಿನ್ನೆಲೆಯಲ್ಲಿ ಈ ನಡೆ ಎನ್ನಲಾಗಿದೆ.
ಸುಳ್ಳು ಸುದ್ದಿಗಳನ್ನು ಹರಡುವವರಿಗೆ ಐದು ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದಲ್ಲದೆ, 30 ಲಕ್ಷ ರಿಯಾಲ್ ದಂಡವನ್ನು ವಿಧಿಸಲಾಗುವ ಅಪರಾಧವಾಗಿದೆ ಎಂದು ಸಾರ್ವಜನಿಕ ಪ್ರಾಸಿಕ್ಯೂಷನ್ ಹೇಳಿದೆ.
ದೇಶದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮುರಿಯಲು ಕೆಲವರು ಉದ್ದೇಶಪೂರ್ವಕವಾಗಿ ಕೆಲವರು ಸುಳ್ಳು ಸುದ್ದಿಗಳನ್ನು ಸೃಷ್ಟಿಸುತ್ತಿದ್ದಾರೆ. ಇದನ್ನು ಅಂತರ್ಜಾಲ ಮತ್ತು ಮೊಬೈಲ್ ಫೋನ್ ಸಂದೇಶಗಳಾಗಿ ರವಾನಿಸುವುದು ಸೈಬರ್ ಕ್ರೈ ವಿರೋಧಿ ಕಾನೂನಿನ ಪ್ರಕಾರ ಶಿಕ್ಷಾರ್ಹವಾಗಿದೆ.
ದೇಶಕ್ಕೆ ಸಂಬಂಧಿಸಿದ ಸಂದೇಶಗಳನ್ನು ಇತರರಿಗೆ ರವಾನಿಸುವ ಮೊದಲು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆಯೇ ಎಂಬುದನ್ನು ಖಾತರಿ ಪಡಿಸುವಂತೆ ಸಾರ್ವಜನಿಕ ಪ್ರಾಸಿಕ್ಯೂಷನ್ ಹೇಳಿದೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ