ಮದೀನಾ:(ಜನಧ್ವನಿ ವಾರ್ತೆ) ವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಕರ್ನಾಟಕದ ಮಂಗಳೂರಿನಿಂದ ಆಗಮಿಸಿದ ಹಜ್ಜಾಜಿಗಳ ತಂಡ ಶನಿವಾರದಂದು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ವಿಮಾನ ನಿಲ್ದಾಣ ತಲುಪಿತು. ಹಜ್ ಕರ್ಮ ನಿರ್ವಹಿಸಲು ಆಗಮಿಸಿದ ನಾವು ಯಾವುದೇ ತೊಂದರೆ ಯಿಲ್ಲದೇ ಮದೀನಾ ತಲುಪಿದ್ದು ಬಹಳ ಸಂತೋಷವಾಗಿದೆ. ಕೆಸಿಎಫ್ ಕಾರ್ಯಕರ್ತರು ನಮ್ಮನ್ನು ಆದರದಿಂದ ಸ್ವಾಗತಿಸಿ, ಎಲ್ಲಾ ಹಾಜಿಗಳಿಗೆ ಧೈರ್ಯ ತುಂಬಿದ್ದಾರೆ ಎಂದು ಬಜ್ಪೆ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ ತಿಳಿಸಿದರು.
ಹಜ್ಜಾಜಿಗಳ ತಂಗುವ ವಸತಿಗಳಿಗೆ ತೆರಳಿದ ಹೆಚ್.ವಿ.ಸಿ ಕಾರ್ಯಕರ್ತರು ದಣಿದು ಬಂದ ಹಜ್ಜಾಜಿಗಳಿಗೆ ಹಣ್ಣು ಹಂಪಲು ನೀಡಿ, ಹಜ್ಜಾಜಿಗಳ ಕೊಠಡಿಗಳಿಗೆ ಲಗೇಜ್ ಸಾಗಿಸಲು ಸಹಕರಿಸಿದರು.

146 ಹಜ್ಜಾಜಿಗಳು ಶನಿವಾರ ದಂದು ಮದೀನಾಕ್ಕೆ ಆಗಮಿಸಿದ್ದು, ಭಾನುವಾರ ಹಾಗೂ ಸೋಮವಾರವು ಕೂಡ ಹಜ್ಜಾಜಿಗಳು ಮದೀನಾ ಆಗಮಿಸಲಿದ್ದಾರೆ.

ಎಲ್ಲಾ ಹಾಜಿಗಳಿಗೆ ದಿನದ 24 ಗಂಟೆಗಳ ಕಾಲ ಅಗತ್ಯವಿರುವ ಸೇವೆ ನೀಡಲು ಕೆಸಿಎಫ್ ಹೆಚ್.ವಿ.ಸಿ ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ ಎಂದು ಹೆಚ್.ವಿ.ಸಿ ರಾಷ್ಟ್ರೀಯ ಸಮಿತಿ ಕನ್ವೀನರ್ ಸೆಲೀಂ ಕನ್ಯಾಡಿ ತಿಳಿಸಿದ್ದಾರೆ. ಈ ವೇಳೆ ಕೆಸಿಎಫ್ ಹೆಚ್.ವಿ.ಸಿ ಮದೀನಾ ಚೇರ್ಮೆನ್ ತಾಜುದ್ದೀನ್ ಸುಳ್ಯ, ಕನ್ವೀನರ್ ರಝಾಕ್ ಸಂತೋಷ್ ನಗರ , ಫಾರೂಖ್ ನಈಮಿ, ಜಬ್ಬಾರ್ ಉಪ್ಪಿನಂಗಡಿ, ರಝಾಕ್ ಬೈತಡ್ಕ,ಅಶ್ರಫ್ ಸಖಾಫಿ ನೂಜಿ, ಇಕ್ಬಾಲ್ ಕುಪ್ಪೆಪದವು, ಮತ್ತಿತರ ಕೆಸಿಎಫ್ ಹೆಚ್.ವಿ.ಸಿ ಕಾರ್ಯಕರ್ತರು ಉಪಸ್ಥಿತರಿದ್ದರು .
ವರದಿ : ಹಕೀಂ ಬೋಳಾರ್















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ