ಮದೀನಾ:(ಜನಧ್ವನಿ ವಾರ್ತೆ) ವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಕರ್ನಾಟಕದ ಮಂಗಳೂರಿನಿಂದ ಆಗಮಿಸಿದ ಹಜ್ಜಾಜಿಗಳ ತಂಡ ಶನಿವಾರದಂದು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ವಿಮಾನ ನಿಲ್ದಾಣ ತಲುಪಿತು. ಹಜ್ ಕರ್ಮ ನಿರ್ವಹಿಸಲು ಆಗಮಿಸಿದ ನಾವು ಯಾವುದೇ ತೊಂದರೆ ಯಿಲ್ಲದೇ ಮದೀನಾ ತಲುಪಿದ್ದು ಬಹಳ ಸಂತೋಷವಾಗಿದೆ. ಕೆಸಿಎಫ್ ಕಾರ್ಯಕರ್ತರು ನಮ್ಮನ್ನು ಆದರದಿಂದ ಸ್ವಾಗತಿಸಿ, ಎಲ್ಲಾ ಹಾಜಿಗಳಿಗೆ ಧೈರ್ಯ ತುಂಬಿದ್ದಾರೆ ಎಂದು ಬಜ್ಪೆ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ ತಿಳಿಸಿದರು.
ಹಜ್ಜಾಜಿಗಳ ತಂಗುವ ವಸತಿಗಳಿಗೆ ತೆರಳಿದ ಹೆಚ್.ವಿ.ಸಿ ಕಾರ್ಯಕರ್ತರು ದಣಿದು ಬಂದ ಹಜ್ಜಾಜಿಗಳಿಗೆ ಹಣ್ಣು ಹಂಪಲು ನೀಡಿ, ಹಜ್ಜಾಜಿಗಳ ಕೊಠಡಿಗಳಿಗೆ ಲಗೇಜ್ ಸಾಗಿಸಲು ಸಹಕರಿಸಿದರು.

146 ಹಜ್ಜಾಜಿಗಳು ಶನಿವಾರ ದಂದು ಮದೀನಾಕ್ಕೆ ಆಗಮಿಸಿದ್ದು, ಭಾನುವಾರ ಹಾಗೂ ಸೋಮವಾರವು ಕೂಡ ಹಜ್ಜಾಜಿಗಳು ಮದೀನಾ ಆಗಮಿಸಲಿದ್ದಾರೆ.

ಎಲ್ಲಾ ಹಾಜಿಗಳಿಗೆ ದಿನದ 24 ಗಂಟೆಗಳ ಕಾಲ ಅಗತ್ಯವಿರುವ ಸೇವೆ ನೀಡಲು ಕೆಸಿಎಫ್ ಹೆಚ್.ವಿ.ಸಿ ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ ಎಂದು ಹೆಚ್.ವಿ.ಸಿ ರಾಷ್ಟ್ರೀಯ ಸಮಿತಿ ಕನ್ವೀನರ್ ಸೆಲೀಂ ಕನ್ಯಾಡಿ ತಿಳಿಸಿದ್ದಾರೆ. ಈ ವೇಳೆ ಕೆಸಿಎಫ್ ಹೆಚ್.ವಿ.ಸಿ ಮದೀನಾ ಚೇರ್ಮೆನ್ ತಾಜುದ್ದೀನ್ ಸುಳ್ಯ, ಕನ್ವೀನರ್ ರಝಾಕ್ ಸಂತೋಷ್ ನಗರ , ಫಾರೂಖ್ ನಈಮಿ, ಜಬ್ಬಾರ್ ಉಪ್ಪಿನಂಗಡಿ, ರಝಾಕ್ ಬೈತಡ್ಕ,ಅಶ್ರಫ್ ಸಖಾಫಿ ನೂಜಿ, ಇಕ್ಬಾಲ್ ಕುಪ್ಪೆಪದವು, ಮತ್ತಿತರ ಕೆಸಿಎಫ್ ಹೆಚ್.ವಿ.ಸಿ ಕಾರ್ಯಕರ್ತರು ಉಪಸ್ಥಿತರಿದ್ದರು .
ವರದಿ : ಹಕೀಂ ಬೋಳಾರ್















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್