janadhvani

Kannada Online News Paper

ಜುಲೈ 27:ಮರಿಕ್ಕಳದಲ್ಲಿ ಎಸ್ಸೆಸ್ಸೆಫ್ ವತಿಯಿಂದ ಶಾದುಲಿ ರಾತೀಬ್

ಮೊಂಟೆಪದವು:ಎಸ್ಸೆಸ್ಸೆಫ್ ಮರಿಕ್ಕಳ ಶಾಖೆ ವತಿಯಿಂದ ಶಾದುಲಿ ರಾತೀಬ್ ಜಮಾಅತ್ ಖತೀಬ್ ಅಬ್ಬಾಸ್ ಸಖಾಫಿ ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ಜುಲೈ 27 ಶುಕ್ರವಾರ ಸಂಜೆ 7 ಗಂಟೆಗೆ ಮರಿಕ್ಕಳ ಮಸ್ಜಿದ್ ನಲ್ಲಿ ನಡೆಯಲಿದೆ.

ಸಯ್ಯಿದ್ ಮುಹ್ಸಿನ್ ಅವೇಲತ್ ತಂಙಳ್ ಕ್ಯಾಲಿಕೆಟ್ ಶಾದುಲಿ ರಾತಿಬ್ ಗೆ ನೇತೃತ್ವ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಸದರ್ ಉಸ್ತಾದ್ ಝೈನುಲ್ ಆಬಿದ್ ಸಖಾಫಿ ಮುಲಾರ್ ಪಟ್ಣ,ಮುಅಲ್ಲಿಂ ಉಸ್ತಾದ್ ರಮಳಾನ್ ಮದನಿ ಕಂಬ್ಲಬೆಟ್ಟು,ಜಮಾಅತ್ ಉಪಾಧ್ಯಕ್ಷ ಅಬ್ಬಾಸ್ ಕೊಡಂಚಲ್,ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಚಂದಹಿತ್ತಿಲು,ಕೋಶಾಧಿಕಾರಿ ಹನೀಫ್ ಚಂದಹಿತ್ತಿಲು,ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಮರಿಕ್ಕಳ ಶಾಖೆಯ ಅಧ್ಯಕ್ಷ ಮನ್ಸೂರ್ ಹಿಮಮಿ, ಎಸ್.ವೈ.ಎಸ್ ಮರಿಕ್ಕಳ ಬ್ರಾಂಚ್ ಅಧ್ಯಕ್ಷ ಆಲಿಕುಂಞಿ ಅಗಲ್ತಬೆಟ್ಟು ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮರಿಕ್ಕಳ ಶಾಖೆಯ ಪ್ರಧಾನ ಕಾರ್ಯದರ್ಶಿ ಅಝರ್ ಅಗಲ್ತಬೆಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.