ಬೆಂಗಳೂರು, ಜು.31- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 2 ತಿಂಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಇಂದು ಅಧಿಕೃತವಾಗಿ ಬಿಡುಗಡೆಯಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಸಚಿವರಿಬ್ಬರಿಗೂ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡಲಾಗಿದೆ .ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಂಚಿಕೆ ಮಾಡಿದ್ದಾರೆ ಎನ್ನಲಾಗಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್-ಬೆಂಗಳೂರು ನಗರ ಮತ್ತು ತುಮಕೂರು, ಡಿಕೆ ಶಿವಕುಮಾರ್ ಅವರಿಗೆ ರಾಮನಗರ ಮತ್ತು ಬಳ್ಳಾರಿ ಹಾಗೂ ಕೃಷ್ಣ ಬೈರೇಗೌಡಗೆ ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಉಸ್ತುವಾರಿಯನ್ನು ನೀಡಲಾಗಿದೆ. ಇನ್ನುಳಿದಂತೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಈ ಕೆಳಕಂಡಂತಿದೆ.
ಕೆ.ಜೆ.ಜಾರ್ಜ್- ಚಿಕ್ಕಮಗಳೂರು
ರಮೇಶ್ ಜಾರಕಿಹೊಳಿ- ಬೆಳಗಾವಿ.
ಶಿವಾನಂದಪಾಟೀಲ್- ಬಾಗಲಕೋಟೆ
ಪ್ರಿಯಾಂಕ್ ಖರ್ಗೆ-ಕಲಬುರ್ಗಿ
ರಾಜಶೇಖರ ಪಾಟೀಲ್ – ಯಾದಗಿರಿ
ವೆಂಕಟರಮಣಪ್ಪ – ಚಿತ್ರದುರ್ಗ
ಶಿವಶಂಕರ ರೆಡ್ಡಿ – ಚಿಕ್ಕಬಳ್ಳಾಪುರ
ಯು. ಟಿ. ಖಾದರ್ – ದಕ್ಷಿಣ ಕನ್ನಡ
ಪುಟ್ಟರಂಗಶೆಟ್ಟಿ – ಚಾಮರಾಜನಗರ
ಜಮೀರ್ ಅಹಮದ್ – ಹಾವೇರಿ
ಜಯಮಾಲಾ – ಉಡುಪಿ
ಆರ್. ಶಂಕರ್ – ಕೊಪ್ಪಳ
ಎನ್. ಮಹೇಶ್ ಗದಗ
ವೆಂಕಟರಾವ್ ನಾಡಗೌಡ-ರಾಯಚೂರು
ಎಸ್. ಆರ್. ಶ್ರೀನಿವಾಸ್ – ದಾವಣಗೆರೆ
ಸಿ. ಎಸ್. ಪುಟ್ಟರಾಜು – ಮಂಡ್ಯ
ಸಾ. ರಾ. ಮಹೇಶ್ – ಕೊಡಗು
ಬಂಡೆಪ್ಪ ಕಾಶಂಪುರ್- ಬೀದರ್
ಹೆಚ್. ಡಿ. ರೇವಣ್ಣ – ಹಾಸನ
ಡಿ. ಸಿ. ತಮ್ಮನ್ನ – ಶಿವಮೊಗ್ಗ
ಎಂ. ಸಿ. ಮನಗೊಳಿ – ಬಿಜಾಪುರ
ಜಿ.ಟಿ. ದೇವೇಗೌಡ – ಮೈಸೂರು















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ