ಬೈಂದೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ಅಧೀನದಲ್ಲಿ ರಾಜ್ಯಾದಂತ ಸೆಕ್ಟರ್ ಮಟ್ಟದಲ್ಲಿ ನಡೆಯುತ್ತಿರುವ “ನಮ್ಮ ಮಕ್ಕಳು ನಮ್ಮವರಾಗಲು” ಎಂಬ ಘೋಷಣೆಯೊಂದಿಗೆ ಎಸ್ಸೆಸ್ಸೆಫ್ ನಾವುಂದ ಸೆಕ್ಟರ್ ವತಿಯಿಂದ ಜನಜಾಗ್ರತಿ ಅಭಿಯಾನವು ನಾವುಂದ ಜುಮಾ ಮಸೀದಿ ವಠಾರದಲ್ಲಿ ಇತ್ತೀಚೆಗೆ ಬಹಳ ವಿಜೃಂಭಣೆಯಿಂದ ನಡೆಸಲಾಯಿತು.
ನಾವುಂದ ಕೇಂದ್ರ ಮಸೀದಿಯಿಂದ ನಾವುಂದ ಪಟ್ಟಣ ವರೆಗೆ ನಡೆಸಿದ ಕಾಲ್ನಡಿಗೆ ಜಾಥಾದ ಬಳಿಕ ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಉಪಾಧ್ಯಕ್ಷ ಹನೀಫ್ ಸಅದಿ ನಾವುಂದರವರ ಸಭಾಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ದ.ಕ.ಜಿಲ್ಲಾ ನಾಯಕರಾದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉದ್ಘಾಟಿಸಿ, ಶುಭಹಾರೈಸಿದರು. ಸ್ಥಳೀಯ ಮುದರ್ರಿಸರಾದ ಹಾಜಿ ಇಕ್ರಾಮುಲ್ಲಾ ಕಾಮಿಲ್ ಸಖಾಫಿ ಸಂದೇಶ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರು, ಎಸ್ಸೆಸ್ಸೆಫ್ ಕಾರ್ಯಕರ್ತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಮರುಲ್ ಫಾರೂಖ್ ಸಖಾಫಿ ಬಡಾಕೆರೆ ಸ್ವಾಗತಿಸಿ, ಸೆಕ್ಟರ್ ಕಾರ್ಯದರ್ಶಿ ಬದ್ರುದ್ದೀನ್ ಝುಹುರಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ