ಮಕ್ಕಾ: ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ವತಿಯಿಂದ ಹಜ್ಜಾಜ್ ಗಳ ಸಮ್ಮುಖದಲ್ಲಿ ಭಾರತದ 72ನೇ ಸ್ವಾತಂತ್ರ್ಯೋತ್ಸವವನ್ನು ಅಝೀಝಿಯಾದಲ್ಲಿ ಇಂಡಿಯನ್ ಹಜ್ಜ್ ಬಿಲ್ಡಿಂಗ್ 106 ರಲ್ಲಿ ವಿಜ್ರಂಭಣೆಯಿಂದ ಆಚರಿಸಲಾಯಿತು.
ದ. ಕ ಜಿಲ್ಲೆ SYS ಉಪಾಧ್ಯಕ್ಷರು ಹಂಝ ಮದನಿ ಮಿತ್ತೂರು ಕೆಸಿಎಫ್ ನ ಕಾರ್ಯವೈಖರಿಗಳನ್ನು ಶ್ಲಾಘಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾಜ್ಯ ಎಸ್ಸೆಸ್ಸೆಫ್ ಇಹ್ಸಾನ್ ಪ್ರ. ಕಾರ್ಯದರ್ಶಿ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಸಂದೇಶ ಭಾಷಣ ನಡೆಸಿದರು.ದ.ಕ.ಜಿಲ್ಲೆ SYS ಅಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಕೆಸಿಎಫ್ ಕತ್ತಾರ್ ನ್ಯಾಷನಲ್ ಅಧ್ಯಕ್ಷ ರಹೀಮ್ ಸಅದಿ, ಮಂಗಳೂರು ವಿಶ್ವವಿದ್ಯಾನಿಲಯ ಪ್ರೊಫೆಸರ್ ಡಾ. ಇಸ್ಮಾಯಿಲ್ ನಡುಪದವು ಶುಭ ಹಾರೈಸಿ ಮಾತನಾಡಿದರು.
ವೇದಿಕೆಯಲ್ಲಿ ದ.ಕ ಜಿಲ್ಲೆ SSF ಸದಸ್ಯರು ಸಯ್ಯಿದ್ ಖುಬೈಬ್ ತಂಙಲ್ ಉಳ್ಳಾಲ, HVC ಹಜ್ಜ್ ತರಬೇತಿದಾರ ಉಮರ್ ಮದನಿ ಖಾಮಿಲ್ ಸಖಾಫಿ ಪರಪ್ಪು, HVC ಮಕ್ಕತುಲ್ ಮುಕರ್ರಮಃ ಸೆಕ್ಟರ್ ನೇತಾರ ಮೂಸಾ ಹಾಜಿ ಕಿನ್ಯ, ಇಸ್ಮಾಯಿಲ್ ಮುಸ್ಲಿಯಾರ್ ಇಂದ್ರಾಜೆ, ಅಬ್ಬಾಸ್ ಮದನಿ ನೂಜಿ, ಅಬ್ದುಲ್ಲಾ ಮುಸ್ಲಿಯಾರ್ ಪಟ್ಟೋರಿ, ಕೆಸಿಎಫ್ ಮಕ್ಕತುಲ್ ಮುಕರ್ರಮಃ HVC ವಾಲೇಂಟೀರ್ ಕೋರ್ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ರಾಷ್ಟ್ರಗೀತೆಯೊಂದಿಗೆ ಆರಂಭಿಸಿದ ಕಾರ್ಯಕ್ರಮವನ್ನು ಕೆಸಿಎಫ್ ಮಕ್ಕತುಲ್ ಮುಕರ್ರಮಃ ಅಧ್ಯಕ್ಷರು ಹನೀಫ್ ಸಖಾಫಿ ಬೊಳ್ಮಾರ್ ಸ್ವಾಗತಿಸಿ, ಪ್ರ. ಕಾರ್ಯದರ್ಶಿ ಇಕ್ಬಾಲ್ ಕಕ್ಕಿಂಜೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ