ರಿಯಾದ್: ಇತ್ತೀಚೆಗೆ ರಿಯಾದ್ ನಲ್ಲಿ ಹೃದಯಾಘಾತದಿಂದ ನಿಧನರಾದ ವಿಟ್ಲ ಮೂಲದ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಇಲ್ಲಿನ ಎಕ್ಸಿಟ್ 15 ರ ಅಲ್ ರಾಜ್’ಹಿ ಮಸೀದಿಯ ಸಾರ್ವಜನಿಕ ದಫನ ಭೂಮಿಯಲ್ಲಿ ನೆರವೇರಿಸಲಾಯಿತು.
ಬಂಟ್ವಾಳ ತಾಲೂಕಿನ ಕಡಂಬು – ಅನಿಲಕಟ್ಟೆ ನಿವಾಸಿ ಮೋನು ಬ್ಯಾರಿಯ ಹಿರಿಯ ಪುತ್ರ ಮೆಹ್ಮೂದ್ (53) ಕಳೆದ ಇಪ್ಪತ್ತು ವರ್ಷಗಳಿಂದ ಸೌದಿ ಅರೇಬಿಯಾದ ರಿಯಾದ್ ನಲ್ಲಿ ನೌಕರಿ ಮಾಡುತ್ತಿದ್ದು ಇತ್ತೀಚೆಗಷ್ಟೇ ಊರಿಗೆ ಹೋಗಿ ಮರಳಿದ್ದರು ಎನ್ನಲಾಗಿದೆ. ಮೊನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಂದೇ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಕರಾವಳಿ ಮೂಲದ ವ್ಯಕ್ತಿಯೊಬ್ಬರ ನಿಧನವಾಗಿದೆ ಎಂಬ ಸುದ್ದಿ ಸಿಕ್ಕಿದ ತಕ್ಷಣ ಆಸ್ಪತ್ರೆಗೆ ಧಾವಿಸಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ಕಾರ್ಯಕರ್ತರು ಮೃತರ ಆಪ್ತರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮೃತ ವ್ಯಕ್ತಿಯ ಮರಣೋತ್ತರ ಕ್ರಿಯೆಗೆ ಅಗತ್ಯ ಬರುವ, ವಿವಿಧ ಮೂಲಗಳಿಂದ ಸಂಗ್ರಹಿಸಬೇಕಾದ ದಾಖಲೆ ಪತ್ರಗಳನ್ನು ತ್ವರಿತ ಗತಿಯಲ್ಲಿ ಸರಿಪಡಿಸಿ, ಕುಟುಂಬದ ಅನುಮತಿ ಪಡೆದು ಇಲ್ಲೇ ದಫನ ಮಾಡಲಾಯಿತು.
ಸೌದಿ ಅರೇಬಿಯಾದ ವಲಸೆ ನೀತಿಯಡಿಯಲ್ಲಿ ಬರುವ ಕಾನೂನಿನಂತೆ ಇಲ್ಲಿ ಮೃತರಾಗುವ ವ್ಯಕ್ತಿಗಳ ಮೃತದೇಹವನ್ನು ವಾರಸುದಾರರಿಗೆ ಬಿಟ್ಟು ಕೊಡಬೇಕಾದರೆ ಅನೇಕ ಇಲಾಖೆಗಳಿಂದ ಕಡತಗಳನ್ನು ಸರಿಪಡಿಸಬೇಕಾದ ಅಗತ್ಯವಿದೆ. ಅದೇ ರೀತಿ ಊರಿನ ಕುಟುಂಬ ವರ್ಗದ ಅನುಮತಿ ಪತ್ರ ಕೂಡ ತರಿಸಬೇಕು. ಈಯೆಲ್ಲ ಕೆಲಸಗಳನ್ನೂ ತನ್ನ ಸ್ವಂತ ಕೆಲಸವನ್ನು ಬದಿಗಿಟ್ಟು ಎರಡೇ ದಿನಗಳಲ್ಲಿ ಮಾಡಿ ಮುಗಿಸಿದ ಕೆಸಿಎಫ್ ರಿಯಾದ್ ಝೋನ್ ಮುಖಂಡ ಮಜೀದ್ ವಿಟ್ಲ ರವರಿಗೆ ಮೃತರ ಕುಟುಂಬವು ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದೆ.
ಇಲ್ಲಿನ ಎಕ್ಸಿಟ್ 15 ರ ಅಲ್ ರಾಜ್’ಹಿ ಮಸೀದಿಯಲ್ಲಿ ನಡೆದ ಜನಾಝ ನಮಾಝ್ ಹಾಗೂ ಅಂತ್ಯ ಕ್ರಿಯೆಯಲ್ಲಿ ಮೃತರ ಸಹೋದರ ಹಮೀದ್, ಮೃತರ ಆಪ್ತರು, ಇತರ ಕುಟುಂಬ ಮಿತ್ರಾದಿಗಳು, ಸ್ಥಳೀಯ ನಿವಾಸಿಗಳು, ಕೆಸಿಎಫ್ ಕಾರ್ಯಕರ್ತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ