ದೋಹಾ:ಉದ್ಯೋಗ ಸಂಬಂಧಿತ ಭಿನ್ನಾಭಿಪ್ರಾಯ ಉಂಟಾದಲ್ಲಿ ನ್ಯಾಯಯುತವಾಗಿ ಕಾರ್ಮಿಕರಿಗೆ ಲಭಿಸಬೇಕಾದ ಹಣವನ್ನು ಕಾರ್ಮಿಕರ ಸಹಕಾರ ವಿಮಾ ನಿಧಿಯಿಂದ ನೀಡಲಾಗುವುದು ಎಂದು ಅಭಿವೃದ್ಧಿ ಮತ್ತು ಕಾರ್ಮಿಕ, ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಈಸಾ ಬಿನ್ ಸಾದ್ ಅಲ್ ಜಫಾಲಿ ಅಲ್ ನುಐಮಿ ಹೇಳಿದ್ದಾರೆ.
ಕ್ಯಾಬಿನೆಟ್ ಈ ಕರಡು ಕಾನೂನನ್ನು ಅನುಮೋದಿಸಿದೆ. ಅಮೀರ್ ಶೈಖ್ ತಮೀಮ್ ಬಿನ್ ಹಮದ್ ಅಲ್ ಥಾನಿಯವರಿಗೆ ಸಲ್ಲಿಸಬೇಕಾದ ಕರಡುಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅಲ್-ನುಐಮಿ ಹೇಳಿದರು.
ಉದ್ಯೋಗದಾತನಿಗೆ ಹೊಣೆಗಾರಿಕೆಯನ್ನು ನಿಭಾಯಿಸಲು ಸಾಧ್ಯವಾಗದಿದ್ದದ್ದಲ್ಲಿ, ನಿಧಿಯಿಂದ ಕಾರ್ಮಿಕರಿಗೆ ಹಣ ಪಾವತಿಸಲಾಗುತ್ತದೆ.ಕೆಲಸಗಾರನಿಗೆ ತನ್ನ ಊರಿಗೆ ಮರಳಲು ಸೌಕರ್ಯ ಕೂಡ ಲಭಿಸಲಿದೆ. ಇದನ್ನು ಮಾಲೀಕರಿಂದ ನಂತರ ಪಡೆಯಲಾಗುತ್ತದೆ.
ಕೆಲಸಗಾರರಿಗೆ ಆಟದ ಮೈದಾನಗಳು ಮತ್ತು ಇತರ ಮನರಂಜನಾ ಸೌಲಭ್ಯಗಳಿಗೂ ಕಾರ್ಮಿಕರ ನಿಧಿಯಿಂದ ಧನ ಸಹಾಯ ನೀಡಲಾಗುತ್ತದೆ.ಸರ್ಕಾರ ನೀಡುವ ಅನುದಾನದ ಜೊತೆಗೆ, ಹೂಡಿಕೆಗಳಿಂದ ಲಭಿಸುವ ಆದಾಯವನ್ನೂ ನಿಧಿಗೆ ನೀಡಲಾಗುತ್ತದೆ.ಕಾರ್ಮಿಕರ ಹಕ್ಕುಗಳಿಗಾಗಿ ಜಾರಿಗೊಳಿಸಲಾದ ಕಾನೂನುಗಳ ಹೊರತಾಗಿ ನಿಧಿಯನ್ನು ರಚಿಸಲಾಗಿದೆ.
ಕತಾರ್ ಕಾರ್ಮಿಕರಿಗೆ ಸುರಕ್ಷಿತ ಉದ್ಯೋಗ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಅದು ಎಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಈಸಾ ಬಿನ್ ಸಾದ್ ಅಲ್ ಜಫಾಲಿ ಅಲ್ ನುಐಮಿ ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ