ಕೆಸಿಎಫ್ ಒಮಾನ್ ನಿಝ್ವ ಝೋನ್ ವತಿಯಿಂದ ಸ್ವಲಾತ್ ಮಜ್ಲಿಸ್ ಹಾಗು ಬೀಳ್ಕೋಡುಗೆ ಸಮಾರಂಭವು ಇತ್ತೀಚೆಗೆ ಪರ್ಕ್ ಇಮಾಮ್ ಜಾಬಿರ್ ಬಿನ್ ಝೈದ್ ಮಸೀದಿಯಲ್ಲಿ ಬಹು ಅಬ್ದುರ್ರಹಿಮಾನ್ ಸಖಾಫಿ ಇವರ ನೇತೃತ್ವದಲ್ಲಿ ನಡೆಯಿತು. ಸುಮಾರು ಮೂವತ್ತೈದು ವರ್ಷಗಳಿಂದ ಒಮಾನಿನಲ್ಲಿ ದುಡಿಯುತ್ತಿದ್ದ ಕೆಸಿಎಫ್ ನಿಝ್ವ ನಾಯಕರಾದ ಮುಹಮ್ಮದ್ ಅಡ್ಯಾರ್ ಕಣ್ಣೂರು ಇವರನ್ನು ಕೆಸಿಎಫ್ ನಿಝ್ವ ಝೋನ್ ವತಿಯಿಂದ ಬೀಳ್ಕೋಡಲಾಯಿತು. ಪ್ರಸ್ತುತ ಸಮಾರಂಭದಲ್ಲಿ ಸುಲೈಮಾನ್ ಸಖಾಫಿರವರು ಮುಹರ್ರಮ್ ಪ್ರಾಮುಖ್ಯತೆಯನ್ನು ವಿವರಿಸಿದರು. ಕೆಸಿಎಫ್ ಒಮಾನ್ ರಾಷ್ಟ್ರೀಯ ಕೊಶಾಧಿಕಾರಿ ಕಾಸಿಂ ಹಾಜಿ, ಸಯ್ಯದ್ ಸೈಫುದ್ದೀನ್ ಅಲ್ ಹೈದ್ರೋಸಿ ಕೊಡಗು, ಝೋನ್ ಅಧ್ಯಕ್ಷರಾದ ಕಲಂದರ್ ಬಾಷ, ಇಬ್ರಾಹಿಮ್ ಕಟ್ಪಾಡಿ, ಅಬ್ದುಲ್ ಹಮೀದ್ ಕನ್ನಂಗಾರ್, ಹಾಗೂ ಝೋನ್ ಸದಸ್ಯರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ