ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿಯ ವತಿಯಿಂದ ನಡೆಯಲಿರುವ ಇಲೈಕ ಯಾ ರಸೂಲಲ್ಲಾಹ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ರಚನೆಯು ಕೆಸಿಎಫ್ ಕುವೈತ್ ರಾಷ್ಟ್ರೀಯ ಅಧ್ಯಕ್ಷ ರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಉಸ್ತಾದರ ಘನ ಅಧ್ಯಕ್ಷತೆಯಲ್ಲಿ ದುವಾದೊಂದಿಗೆ ಕುವೈತ್ ಸಿಟಿಯಲ್ಲಿರುವ ನಶಾತ್ ಹಾಲ್ ನಲ್ಲಿ ದಿನಾಂಕ 21/09/2018 ರಂದು ಮಗ್ರಿಬ್ ನಮಾಝ್ ನ ನಂತರ ನಡೆಯಿತು.

ಕೆಸಿಎಫ್ ಕುವೈತ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜನಾಬ್ ತೌಫೀಕ್ ಅಡ್ಡೂರ್ ಸ್ವಾಗತಿಸಿದರು. ರಾಷ್ಟ್ರೀಯ ಶಿಕ್ಷಣ ವಿಭಾಗದ ಚೆರ್ಮೇನ್ ಬಹುಮಾನ್ಯ ಫಾರೂಕ್ ಸಖಾಫಿ ಉದ್ಘಾಟಿಸಿದರು.ಕೆಸಿಎಫ್ ಕುವೈತ್ ಸೌತ್ ಝೋನ್ ಚೆಯರ್ಮ್ಯಾನ್ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ ಉಸ್ತಾದರು ಮುಹರ್ರಂ ತಿಂಗಳ ಬಗ್ಗೆ ತಿಳಿಸಿದರು.ರಾಷ್ಟ್ರೀಯ ಶಿಕ್ಷಣ ಕನ್ವೀನರ್ ಬಹುಮಾನ್ಯ ಬಾದುಷ ಸಖಾಫಿ ಹಾಗೂ ಕೆಸಿಎಫ್ ಅಂತರರಾಷ್ಟ್ರೀಯ ಆಡಳಿತ ವಿಭಾಗದ ಕನ್ವೀನರ್ ಬಹುಮಾನ್ಯ ಹುಸೈನ್ ಎರ್ಮಾಡ್ ರವರು ಉಪಸ್ಥಿತರಿದ್ದರು.

ದಿನಾಂಕ ನವೆಂಬರ್ 30 ರಂದು ನಡೆಯಲಿರುವ ಇತಿಹಾಸದಲ್ಲಿ ಆಧ್ಯಾತ್ಮಿಕ ಹಾಗೂ ಲೌಕಿಕ ಇವೆರಡರಲ್ಲೂ ನಾಯಕರಾದ ಮುಹಮ್ಮದ್ ಮುಸ್ತಫಾ (ಸ.ಅ)ರ ಮೇಲಿನ ಅಪಾರ ಪ್ರೇಮ ಪ್ರಕಟಿಸುವ *ಇಲೈಕ ಯಾ ರಸೂಲಲ್ಲಾಹ* *ಸಂದೇಶ ವಾಹಕರೆ ತಮ್ಮೆಡಗೆ* ಎಂಬ ಘೋಷ ವಾಕ್ಯ ದೊಂದಿಗೆ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೈಯದ್ ಕುಟುಂಬದ ಧ್ರುವ ತಾರೆ,ತಾಜುಲ್ ಉಲಮಾ ರ ಸುಪುತ್ರರ ದ.ಕ ಸಂಯುಕ್ತ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರ ದುವಾಶಿರ್ವಚನ ನೀಡಲಿದ್ದಾರೆ. ಹುಬ್ಬು ರಸೂಲ್ ಮುಖ್ಯ ಪ್ರಭಾಷಣಕಾರರಾಗಿ ಬಹುಮಾನ್ಯ ಫಾರೂಕ್ ನಇಮಿ ಆಗಮಿಸಲಿದ್ದಾರೆ.

ಈ ಸ್ವಾಗತ ಸಮಿತಿಯ ಚೆಯರ್ಮ್ಯಾನ್ ಆಗಿ ಜನಾಬ್ ಯಾಕೂಬ್ ಕಾರ್ಕಳ,ಕನ್ವೀನರ್ ಆಗಿ ಜನಾಬ್ ತೌಫೀಕ್ ಅಡ್ಡೂರ್ ಮತ್ತು ಕೋಶಾಧಿಕಾರಿ ಆಗಿ ಜನಾಬ್ ಮುಸ್ತಫಾ ಉಳ್ಳಾಲ ಅವರನ್ನು ಆಯ್ಕೆ ಮಾಡಲಾಯಿತು.
ಕೆಸಿಎಫ್ ಉಲಮಾ ನೇತ್ರತ್ವದಲ್ಲಿ ಸಲಹಾ ಸಮಿತಿ,
ಪ್ರಚಾರ ಸಮಿತಿ,ಜಾಹಿರಾತು ಸಮಿತಿ,ವಿಶೇಷಾಂಕ ಪ್ರತಿ ಸಂಪಾದಕ ಸಮಿತಿ,ವಾಹನ,ಆಹಾರ ವಿಭಾಗದ ಸಮಿತಿ ರಚಿಸಿ ಚೇಯರ್ಮ್ಯಾನ್,ಕನ್ವೀನರ್ ರನ್ನು ಆಯ್ಕೆಮಾಡಲಾಯಿತು. ಹಾಗೂ ಕಾರ್ಯಕ್ರಮದ ಕೂಪನ್ ಹಾಗೂ ಪೊಸ್ಟರ್ ಈ ಸಂದರ್ಭದಲ್ಲಿ ಬಿಡುಗಡೆ ಗೊಳಿಸಲಾಯಿತು.
ಕೆಸಿಎಫ್ ರಾಷ್ಟ್ರೀಯ ನಾಯಕರು,ಝೋನ್,ಸೆಕ್ಟರ್ ವಿಭಾಗದ ನಾಯಕರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ