janadhvani

Kannada Online News Paper

ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಚುನಾವಣಾ ಕಾರ್ಯಾಗಾರ

ಉಡುಪಿ: ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಚುನಾವಣಾ ಕಾರ್ಯಾಗಾರವು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಮೌಲಾನಾ ಅಶ್ರಫ್ ಅಂಜದಿ ರವರ ಅಧ್ಯಕ್ಷತೆಯಲ್ಲಿ ಉಡುಪಿಯ ದೊಡ್ಡಣ್ಣಗುಡ್ಡೆ ಮಸೀದಿ ವಠಾರದಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಜ್ಯ ಚುನಾವಣಾ ಮಂಡಳಿ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸ ಅದಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿದರು.

ಎಸ್ಎಸ್ ಎಫ್ ರಾಜ್ಯ
ನಾಯಕರಾದ ಮುಸ್ತಫಾ ನಯೀಮಿ ಮೋಂಟುಗೋಳಿ ತರಗತಿಯನ್ನು ನಡೆಸಿದರು.ಕಾರ್ಯಕ್ರಮದಲ್ಲಿ ರಾಜ್ಯ ನಾಯಕ ರವೂಫ್ ಖಾನ್ ತಾಂತ್ರಿಕ ಮಾಹಿತಿ ನೀಡಿದರು .ಹಮೀದ್ ಮುಸ್ಲಿಯಾರ್ ಶಿವಮೊಗ್ಗ ಸಂಘಟನಾ ಮಾಹಿತಿ ನೀಡಿದರು.ಜಿಲ್ಲಾ ಕಾರ್ಯದರ್ಶಿ ರಹೀಮ್
ಸ್ವಾಗತಿಸಿ,ವಂದಿಸಿದರು.

error: Content is protected !! Not allowed copy content from janadhvani.com