ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಇದರ 2018ನೇ ಸಾಲಿನ ಚುನಾವಣಾ ಪ್ರಕ್ರಿಯೆಯು ನವೆಂಬರ್ ಒಂದರಿಂದ ಜನವರಿ ಕೊನೆಯ ತನಕ ನಡೆಯಲಿದ್ದು ,ಈ ಬಗ್ಗೆ ಯುನಿಟ್, ಸೆಕ್ಟರ್, ಡಿವಿಷನ್, ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಸೇರಿಸಿ ದ.ಕ ಜಿಲ್ಲಾ ಮಟ್ಟದ ಕಾರ್ಯಾಗಾರವು ಬಿ.ಸಿ ರೋಡ್ ಸ್ಪರ್ಶ ಹಾಲ್ ನಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹಮೀದ್ ಮುಸ್ಲಿಯಾರ್ ಶಿವಮೊಗ್ಗ ಕಾರ್ಯಾಗಾರವನ್ನು ಉದ್ಘಾಟಿಸಿದರು.

ರಾಜ್ಯ ಚುನಾವಣಾ ಮಂಡಳಿ ಸಂಚಾಲಕ ಹಾಫಿಳ್ ಯಾಕೂಬ್ ಸಅದಿ ನಾವೂರು ಕಾರ್ಯಾಗಾರ ನಡೆಸಿ ಕೊಟ್ಟರು.
ರಾಜ್ಯ ಟೆಕ್ನಿಕಲ್ ಆಫಿಸರ್ ರವೂಫ್ ಖಾನ್ ಕುಂದಾಪುರ ತಾಂತ್ರಿಕ ಮಾಹಿತಿ ನೀಡಿದರು.

ಜಿಲ್ಲಾ ನಾಯಕರಾದ ಇಬ್ರಾಹಿಮ್ ಸಖಾಫಿ ಸೆರ್ಕಳ, ಮುನೀರ್ ಸಖಾಫಿ ಉಳ್ಳಾಲ, ರಶೀದ್ ಹಾಜಿ ವಗ್ಗ, ಮಜೀದ್ ಸಖಾಫಿ ಅಮ್ಮುಂಜೆ ,ಶರೀಫ್ ನಂದಾವರ, ಕಾಸಿಂ ಮುಸ್ಲಿಯಾರ್ ಉಜಿರೆ, ಇಕ್ಬಾಲ್ ಮಂಗಳಪೇಟೆ, ಜಬ್ಬಾರ್ ಕಣ್ಣೂರು, ಮಜೀದ್ ಹಾಫಿಳ್ ಬಡಕಬೈಲ್, ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಸ್ವಾಗತಿಸಿದರು.ದ.ಕ ಜಿಲ್ಲಾ ಚುನಾವಣಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ