ದುಬೈ: ದುಬೈನ ವಾಣಿಜ್ಯ ವಲಯಗಳಲ್ಲಿ ನಿಲ್ಲಿಸಿದ ವಾಹನಗಳಿಂದ ದರೋಡೆ ಹೆಚ್ಚಾದ ಕಾರಣ, ವಾಹನ ಮಾಲೀಕರಿಗೆ ದುಬೈ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇಂಜಿನ್ ನಿಲ್ಲಿಸದೇ ವಾಹನವನ್ನು ಬಿಟ್ಟು ಕದಲದಿರುವಂತೆ ಟ್ವಿಟ್ಟರ್ ಪುಟದಲ್ಲಿ ಪೊಲೀಸ್ ಎಚ್ಚರಿಕೆಯ ಸಂದೇಶವನ್ನು ಪೋಸ್ಟ್ ಮಾಡಿದೆ. ಜಬೆಲ್ ಅಲಿ ಮತ್ತು ಅಲ್ ಖಿಸೈಸ್ ಕೈಗಾರಿಕಾ ಪ್ರದೇಶಗಳಲ್ಲಿ ನಿಲುಗಡೆ ಮಾಡಲಾದ ಕಾರುಗಳಿಂದ ಬ್ಯಾಟರಿಗಳನ್ನು ಕದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.
ಬಂಧನಕ್ಕೊಳಗಾದ ಆ ನಾಲ್ಕು ಮಂದಿಯೂ ಏಷ್ಯನ್ ವಂಶಜರಾಗಿದ್ದರು. ಬ್ಯಾಟರಿಗಳನ್ನು ಕದ್ದು ಅರ್ಧ ಬೆಲೆಗೆ ಮಾರಾಟ ಮಾಡುತ್ತಿದ್ದ ಕಳ್ಳರನ್ನು ಕುತೂಹಲಕಾರಿಯಾಗಿ ಬಂಧಿಸಲಾಗಿತ್ತು.
ಸೂಚನೆಗಳು
* ಸ್ವಲ್ಪ ಸಮಯದ ಮಟ್ಟಿಗಾದರೂ ಸರಿ, ಇಂಜಿನ್ ಚಾಲನೆಯಲ್ಲಿಟ್ಟು ವಾಹನ ಬಿಟ್ಟು ಕದಲಬೇಡಿ.
* ವಾಹನದ ಬಾಗಿಲನ್ನು ಲಾಕ್ ಮಾಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ.
* ಇರುಳು ಪ್ರದೇಶಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಡಿ.
* ಒಂಟಿ ಸ್ಥಳಗಳಲ್ಲಿ ಮತ್ತು ಮರಳು ಪ್ರದೇಶಗಳಲ್ಲಿ ದೀರ್ಘ ಸಮಯ ಪಾರ್ಕ್ ಮಾಡುವುದು ಅಪಾಯಕಾರಿಯಾಗಿದೆ.
* ನಿಲುಗಡೆ ಮಾಡಿದ ಕಾರಿನ ಒಳಗೆ ದುಬಾರಿ ವಸ್ತುಗಳನ್ನು ಹೊರಗೆ ಕಾಣುವ ರೀತಿಯಲ್ಲಿ ಇಡಬೇಡಿ.
* ಉತ್ತಮ ಬೆಳಕಿರುವ ಸಿಸಿಟಿವಿ ಕ್ಯಾಮೆರಾಗಳ ಮೇಲ್ನೋಟವಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವುದು ಅತ್ಯಂತ ಸುರಕ್ಷಿತ ಎಂದು ಪೊಲೀಸರ ಸೂಚನೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ