ದಾವಣಗೆರೆ:ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಇದರ ವಿವಿಧ ಘಟಕಗಳ ಚುನಾವಣೆ ನವೆಂಬರ್ ಒಂದರಿಂದ ಜನವರಿ ಕೊನೆಯ ತನಕ ನಡೆಯಲಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ರಾಜ್ಯ ಮಟ್ಟದ ಚುನಾವಣಾ ಕಾರ್ಯಾಗಾರ ಪೂರ್ತಿಯಾಗುತ್ತಿದೆ.

ಅದರಂತೆ ಮಧ್ಯಕರ್ನಾಟಕದ ದಾವಣಗೆರೆ, ಹಾವೇರಿ, ಚಿತ್ರದುರ್ಗ, ಗದಗ ಮುಂತಾದ ಜಿಲ್ಲೆಗಳ ವಿವಿಧ ಘಟಕಗಳ ಚುನಾವಣಾ ಅಧಿಕಾರಿಗಳು ಮತ್ತು ನಾಯಕರ ಕಾರ್ಯಾಗಾರ ಹರಿಹರದ ಅಂಜುಮಾನ್ ಶಾದಿಮಹಲ್ ನಲ್ಲಿ ನಡೆಯಿತು.

ರಾಜ್ಯ ಚುನಾವಣಾ ಮಂಡಳಿ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ನಾವೂರು ಕಾರ್ಯಾಗಾರ ನಡೆಸಿ ಕೊಟ್ಟರು. ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಹಾಫಿಳ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ಸಂಘಟನಾ ತರಬೇತಿ ನೀಡಿದರು.ಮುಸ್ತಫ ನಯೀಮಿ ಹಾವೇರಿ ಟೀಂ ಹಸನೈನಿ ಬಗ್ಗೆ ವಿವರಿಸಿದರು.

ರವೂಫ್ ಮೂಡುಗೋಪಾಡಿ ತಾಂತ್ರಿಕ ಮಾಹಿತಿ ನೀಡಿದರು. ಎಸ್ ಎಸ್ ಎಫ್ ರಾಜ್ಯ ಸಮಿತಿ ಕಾರ್ಯದರ್ಶಿ ಹಮೀದ್ ಮುಸ್ಲಿಯಾರ್ ಶಿವಮೊಗ್ಗ ರಾಜ್ಯ ಸದಸ್ಯ ಇಕ್ಬಾಲ್ ರಾಣಿಬೆನ್ನೂರು, ದಾವಣಗೆರೆ ಜಿಲ್ಲಾಧ್ಯಕ್ಷ ಸಯ್ಯಿದ್ ಮುಖ್ತಾರ್ ಅಹ್ಮದ್ ರಝ್ವಿ, ಇಮ್ರಾನ್ ರಝಾ ದಾವಣಗೆರೆ, ನಯಾಝ್ ಮಲೆಬೆಣ್ಣೂರು, ಆದಮ್ ಹಝರತ್ ಸಖಾಫಿ ಚಿತ್ರದುರ್ಗ, ಅತಾಉಲ್ಲ ದುರ್ಗ, ಮೌಲಾನಾ ಜಾಫರ್ ಸಾಹೇಬ್ ಹಿರಿಯೂರು, ಸಯ್ಯಿದ್ ರಹ್ಮತುಲ್ಲಾ, ಇರ್ಫಾನ್ ಸವನೂರು ಮುಂತಾದವರು ಉಪಸ್ಥಿತರಿದ್ದರು. ಕೆಕೆಎಂ ಸಖಾಫಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ