ಉಡುಪಿ:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ದಕ್ಷಿಣ ಕನ್ನಡ,ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಕ್ರೀಯ ಕಾರ್ಯಕರ್ತರಿಗಾಗಿ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಎಸ್ಸೆಸ್ಸೆಫ್ ಉಡುಪಿ ಜಲ್ಲಾ ಉಪಾಧ್ಯಕ್ಷ ಹನೀಫ್ ಸ ಅದಿ ನಾವುಂದ ರವರ ಅಧ್ಯಕ್ಷತೆಯಲ್ಲಿ ಖಾಝಿ ಭವನ ಮೂಳೂರು,ಉಡುಪಿಯಲ್ಲಿ ನಡೆಯಿತು.
ಮೂಳೂರು ಜುಮ್ಮಾ ಮಸ್ಜಿದ್ ಮುದರಿಸ್ ಹೈದರ್ ಅಹ್ಸನಿ ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ತರಗತಿ ನಡೆಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ,ರಾಜ್ಯ ನಾಯಕರಾದ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ,ರವೂಫ್ ಖಾನ್,ಅಶ್ರಫ್ ಮುಸ್ಲಿಯಾರ್ ಕುಂದಾಪುರ,ಉಡುಪಿ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ರಖೀಬ್ ಕನ್ನಂಗಾರ್ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಸಿ.ರಹೀಂ ಕಾರ್ಕಳ ಸ್ವಾಗತಿಸಿ,ವಂದಿಸಿದರು.