ವಿಟ್ಲ : ಇಸ್ಲಾಮಿಕ್ ಎಜುಕೇಷನಲ್ ಬೋರ್ಡ್ ಇಂಡಿಯಾ ಇದರ ಅಂಗೀಕಾರದೊಂದಿಗೆ ದೇಶ-ವಿದೇಶಗಳಲ್ಲಿ ಕಾರ್ಯಾಚರಿಸುವ ಸುಮಾರು 9 ಸಾವಿರಕ್ಕಿಂತಲೂ ಅಧಿಕ ಮದ್ರಸಗಳಲ್ಲಿ 2018ನೇ ಸಾಲಿನ ಅರ್ಧವಾರ್ಷಿಕ ಪರೀಕ್ಷೆಯು-ಅಕ್ಟೋಬರ್ 30ರಂದು ಆರಂಭಗೊಳ್ಳಲಿದ್ದು, ನವಂಬರ್ 5 ರಂದು ಕೊನೆಗೊಳ್ಳಲಿದೆ.
ಅದರ ಯಶಸ್ವಿ ನಿರ್ವಹಣೆಗಾಗಿ ರೇಂಜ್,ಜಿಲ್ಲಾ, ರಾಜ್ಯ ಮತ್ತು ಕೇಂದ್ರ ಘಟಕಗಳ ಪರೀಕ್ಷಾ ವಿಭಾಗವು ಸಕ್ರಿಯವಾದ ಕಾರ್ಯಾಚರಣೆಗಳ ಮೂಲಕ ಪ್ರತೀ ಪರೀಕ್ಷಾ ಸೆಂಟರ್ ಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಿದ್ದು, ಒಂದನೇ ತರಗತಿಯಿಂದ ಮೊದಲ್ಗೊಂಡು ಪ್ಲಸ್ ಟೂ ವರೆಗಿನ ಎಲ್ಲಾ ಕ್ಲಾಸ್ ಗಳಿಗೆ ಪರೀಕ್ಷೆ ನಡೆಯಲಿದೆ.
ಕುರ್ಆನ್,ಫಿಕ್ಹ್,ಅಖಾಇದ್, ಅಖ್ಲಾಖ್,ತಝ್’ಕಿಯ್ಯ, ತಾರೀಖ್, ತಜ್’ವೀದ್, ತಪ್ಸೀರ್, ಮಆಲಿಮುತ್ತುಲ್ಲಾಬ್, ದುರೂಸ್,ತಫ್ಹೀಂ, ಕಿತಾಬತ್ ಮುಂತಾದ ಅನೇಕ ವಿಷಯಗಳಲ್ಲಿ ನಡೆಯುವ ಪರೀಕ್ಷೆಯು ಪ್ರತಿದಿನ ಬೆಳಿಗ್ಗೆ 7ಕ್ಕೆ ಆರಂಭಗೊಂಡು 9ಕ್ಕೆ ಕೊನೆಗೊಳ್ಳಲಿದೆ.
ಇದರ ಸುಸೂತ್ರವಾದ ನಿರ್ವಹಣೆಗಾಗಿ ಪ್ರತಿ ರೇಂಜ್ ಸಮಿತಿಯು ಪ್ರತ್ಯೇಕವಾದ ಸ್ಕೋಡ್ ರಚಿಸಿ ಸಕ್ರಿಯವಾಗಿ ಕಾರ್ಯಾಚರಣೆಗಿಳಿದಿದ್ದು, ಪ್ರಸ್ತುತ ತಂಡವು ಆಯಾ ರೇಂಜ್ ವ್ಯಾಪ್ತಿಯಲ್ಲಿರುವ ಮದ್ರಸಗಳಿಗೆ ಭೇಟಿಕೊಟ್ಟು ಪರಿಶೀಲನೆ ನಡೆಸಲಿದೆ. ಆದುದರಿಂದ ಮೊಹಲ್ಲಾ ಸಮಿತಿಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಕೇಂದ್ರ ಪರೀಕ್ಷಾ ವಿಭಾಗವು ವಿನಂತಿಸಿದೆ.
✍🏻mkm ಕಾಮಿಲ್ ಸಖಾಫಿ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ
ಪರೀಕ್ಷೆಗೂ ಹಿಜಾಬ್ ಗೂ ಸಂಬಂಧವಿಲ್ಲ- ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜನಾದೇಶವಿಲ್ಲದೆ ಬಿಜೆಪಿಗೆ ಗೆಲುವು: ಇದು ಇವಿಎಂ ದುರ್ಬಳಕೆ- ಸಂಘಟಿತ ಹೋರಾಟಕ್ಕೆ ಕಾಂಗ್ರೆಸ್ಗೆ ದೀದಿ ಆಹ್ವಾನ