ಬೆಂಗಳೂರು: ಸುನ್ನೀ ಮುಸಲ್ಮಾನರ ಅಧಿಕೃತ ಧ್ವನಿಯಾಗಿರುವ ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ. ಉಸ್ತಾದರ ನಿರ್ದೇಶನದಂತೆ ನಡೆಸಿಕೊಂಡು ಬರುತ್ತಿರುವ ಮಹ್ಳರತುಲ್ ಬದ್ರಿಯ್ಯಃ ವಿಶೇಷ ಕಾರ್ಯಕ್ರಮದ ವಾರ್ಷಿಕ ಸಮ್ಮೇಳನವು ಬೆಂಗಳೂರಿನ ಹೃದಯ ಭಾಗವಾದ ಮೆಜೆಸ್ಟಿಕ್ ತವಕ್ಕಲ್ ಮಸ್ತಾನ್ ದರ್ಗಾ ವಠಾರದಲ್ಲಿ ನವೆಂಬರ್ 2 ರಂದು ಎಸ್.ವೈ.ಎಸ್. ಜಿಲ್ಲಾಧ್ಯಕ್ಷ ಬಶೀರ್ ಸಅದಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ಪ್ರಭಾಷಣ ಲೋಕದ ಅಮೃತತಾರೆ ಬಹು.ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಆಗಮಿಸಲಿದ್ದಾರೆ.
ಸಯ್ಯದ್ ಶಿಹಾಬುದ್ದೀನ್ ಅಮಾನಿ ತಂಙ್ಙಳ್ರವರ ನೇತೃತ್ವದಲ್ಲಿ ಇಶಾಅ್ ನಮಾಜ್ ಬಳಿಕ ದರ್ಗಾ ಝಿಯಾರತ್ ನೊಂದಿಗೆ ಆರಂಭಗೊಂಡು ಮರ್ಖಿನ್ಸ್ ವಿದ್ಯಾರ್ಥಿ ತಂಡಗಳಿಂದ ವಿಶೇಷ ಶೈಲಿಯ ಬುರ್ದಾ ಆಲಾಪನೆಯ ಮೂಲಕ ಮುಂದುವರೆಯಲಿದೆ. ಎಸ್.ಎಂ.ಎ. ಬೆಂಗಳೂರು ಜಿಲ್ಲಾಧ್ಯಕ್ಷ ಎಸ್.ಎಸ್.ಎ.ಖಾದರ್ ಹಾಜಿ ಉದ್ಘಾಟಿಸಿ,ಕರ್ನಾಟಕ ಇಹ್ಸಾನ್ ಚೆಯರ್ಮ್ಯಾನ್ ಎನ್. ಕೆ.ಎಂ. ಶಾಫಿ ಸ ಅದಿ ಪ್ರಾಸ್ತಾವಿಕ ಭಾಷಣಗೈಯ್ಯಲಿದ್ದಾರೆ.ಎಸ್.ವೈ.ಎಸ್. ಜಿಲ್ಲಾ ಕಾರ್ಯದರ್ಶಿ ಮುಜೀಬ್ ಸಖಾಫಿ,ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎಸ್.ಜೆ.ಯು. ಜಿಲ್ಲಾಧ್ಯಕ್ಷ ಎನ್.ಎಂ.ಜಲಾಲುದ್ದೀನ್ ಮುಸ್ಲಿಯಾರ್,ಕಾರ್ಯದರ್ಶಿ ಜಾಫರ್ ನೂರಾನಿ,ಎಸ್.ವೈ.ಎಸ್. ರಾಜ್ಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್,ಎಸ್.ಎಂ.ಎ.ಸೆಕ್ರೆಟರಿ ಅಬ್ದುಲ್ ರಹಿಮಾನ್ ಹಾಜಿ,ಎಸ್.ಜೆ.ಎಂ.ಅಧ್ಯಕ್ಷ ಇಬ್ರಾಹಿಂ ಸಖಾಫಿ,ಕಾರ್ಯದರ್ಶಿ ವಹಾಬ್ ಮುಸ್ಲಿಯಾರ್,ಕರ್ನಾಟಕ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಉಸ್ಮಾನ್ ಶರೀಫ್,ಹೆಟ್.ಟಿ.ಎಂ.ದರ್ಗಾ ಅಧ್ಯಕ್ಷ ನಿಝಾರ್ ಅಹ್ಮದ್,ಕಾರ್ಯದರ್ಶಿ ಮುಹಮ್ಮದ್ ಇನಾಯತುಲ್ಲಾ,ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ತಾಜುದ್ದೀನ್ ಫಾಳಿಲಿ,ಕಾರ್ಯದರ್ಶಿ ಮುನೀರ್ ಹಾಗೂ ಹಲವಾರು ಸಾಮಾಜಿಕ, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ