ದಮಾಮ್ ; ಕರ್ಣಾಟಕ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಸುನ್ನೀ ಯುವಜನ ಸಂಘದ ನೇತೃತ್ವದಲ್ಲಿ ಡಿಸೆಂಬರ್ 3 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಹುಬ್ಬುರ್ರಸೂಲ್ ಕಾನ್ಪೆರನ್ಸ್ ಮತ್ತು ಯು.ಎ ಇ ಕೆ.ಸಿ ಎಫ್ ನ ಪ್ರಾಯೋಜಕತ್ವದಲ್ಲಿ ನಡೆಯುವ ಕನೆಕ್ಟ್ -2018 ಕಾರ್ಯಕ್ರಮದ ಸೌದಿ ಮಟ್ಟದ ಪ್ರಚಾರಕ್ಕೆ ಚಾಲನೆ ಕೊಡಲಾಯಿತು. ಈ ಬಗ್ಗೆ ದಮ್ಮಾಮ್ ನಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಸೌದಿ ಕೆ,ಸಿ ಎಫ್ ನಾಯಕರುಗಳು ಪ್ರಚಾರ ಅಭಿಯಾನದ ವಿವಿಧ ಆಯಾಮಗಳ ಬಗ್ಗೆ ಚರ್ಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಸೌದಿ ಕೆ.ಸಿ ಎಫ್ ಅಧ್ಯಕ್ಷರಾದ ಡಿ.ಪಿ ಯೂಸುಫ್ ಸಖಾಫಿ ಬೈತಾರ್ ವಹಿಸಿದರು, ಮತ್ತು ಐ ಎನ್ ಸಿ ನಾಯಕ ಎನ್ ಎಸ್ ಅಬ್ದುಲ್ಲಾ ಉದ್ಘಾಟಿಸಿದರು. ಮತ್ತು ಐ ಎನ್ ಸಿ ಎಜುಕೇಶನಲ್ ವಿಂಗ್ ಕಾರ್ಯದರ್ಶಿ ಕಮರುದ್ದೀನ್ ಗೂಡಿನಬಳಿ. ಸೌದಿ ಕೆ.ಸಿ ಎಫ್ ಇದರ ಪೈನಾನ್ಸಿಯಲ್ ಕಂಟ್ರೋಲರ್ ಅಬೂಬಕರ್ ಹಾಜಿ ರೈಸ್ಕೋ, ಮತ್ತು ಪ್ರಧಾನ ಕಾರ್ಯದರ್ಶಿ ಉಮರ್ ಫಾರೂಕ್ ಕಾಟಿಪಳ್ಳ ಭಾಗವಹಿಸಿದ್ದರು.

ಕನೆಕ್ಟ್ -18 ” ಕಾರ್ಯಕ್ರಮದಲ್ಲಿ ಕೆ.ಸಿ ಎಫ್ ಯು. ಎ. ಇ ಪ್ರಾಯೋಜಕತ್ವದಲ್ಲಿ ಹನ್ನೊಂದು ಬಡ ಹೆಣ್ಣು ಮಕ್ಕಳ ವಿವಾಹವು ನಡೆಯಲಿದೆ. ಹಾಗೂ ಎಸ್ಸೆಸ್ಸೆಫ್ ನ ವತಿಯಿಂದ ಮೀಲಾದ್ ಜಾಥಾ ಮತ್ತು ಎಸ್ ವೈ ಎಸ್ ನ ವತಿಯಿಂದ ಹುಬ್ಬುರ್ರಸೂಲ್ ಕಾನ್ಪೆರನ್ಸ್ ನಡೆಯಲಿದೆ. ಇದರ ಪ್ರಚಾರ ಸಭೆಯನ್ನು ಸೌದಿಯಾದ್ಯಂತ ಮುಂದಿನ ದಿನಗಳಲ್ಲಿ ಸೌದಿ ಕೆ,ಸಿ ಎಫ್ ನಡೆಸಲಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ