ರಿಯಾದ್: ಕುಂದಾಪುರ ತಾಲೂಕಿನ ಕೋಡಿ ನಿವಾಸಿ ಉಸ್ಮಾನ್ (48) ಎಂಬವರು ಮೊನ್ನೆ ಇಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸಂಘಟನೆಯ ನೆರವಿನೊಂದಿಗೆ ಇಲ್ಲಿನ ನಸೀಂ ಸಾರ್ವಜನಿಕ ಖಬರಸ್ಥಾನದಲ್ಲಿ ದಫನ ಮಾಡಲಾಯಿತು.
ಕಳೆದ ಹದಿನೈದು ವರ್ಷಗಳಿಂದ ರಿಯಾದ್ ನ ವಿವಿಧ ಭಾಗಗಳಲ್ಲಿ ಕಂಪ್ಯೂಟರ್ ಬಿಡಿ ಭಾಗಗಳ ಮಾರಾಟ ನಡೆಸುತ್ತಿದ್ದ ಉಸ್ಮಾನ್ ರವರಿಗೆ ಮೊನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಅಸುನೀಗಿದ್ದರು.

ಕರಾವಳಿ ಮೂಲದ ವ್ಯಕ್ತಿಯೊಬ್ಬರ ನಿಧನವಾಗಿದೆ ಎಂಬ ಸುದ್ದಿ ತಿಳಿದುಕೊಂಡ ಕೆಸಿಎಫ್ ರಿಯಾದ್ ಝೋನ್ ಮುಖಂಡರು ತಕ್ಷಣವೇ ಸ್ಪಂದಿಸಿ ಮೃತರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದ ಉಬೈದ್ ಆಸ್ಪತ್ರೆಗೆ ತೆರಳಿ ಮರಣೋತ್ತರ ಕ್ರಿಯೆಗೆ ಅಗತ್ಯವಿರುವ ದಾಖಲೆಗಳನ್ನು ಹೊಂದಿಸಲು ನೆರವಾಗಿದ್ದಾರೆ.
ಕೆಸಿಎಫ್ ರಿಯಾದ್ ಝೋನ್ ನಾಯಕ ಮಜೀದ್ ವಿಟ್ಲ, ಭಾರತೀಯ ರಾಯಭಾರಿ ಕಚೇರಿ, ಸೌದಿ ಪಾಸ್ಪೋರ್ಟ್ ಇಲಾಖೆ, ಸ್ಥಳೀಯ ಪೋಲಿಸ್ ಸ್ಟೇಶನ್ ಸೇರಿದಂತೆ ವಿವಿಧ ಇಲಾಖೆಗಳಿಂದ ಹಾಗೂ ಊರಿನ ಕುಟುಂಬಸ್ಥರಿಂದ ದೊರೆಯಬೇಕಾಗಿದ್ದ ಕಾಗದಪತ್ರಗಳನ್ನು ಸರಿಪಡಿಸಲು ನೆರವಾಗಿದ್ದು ಮೃತರ ಸಹೋದರ ಅಬ್ದುರಹೀಂ ಹಾಗೂ ಇನ್ನೋರ್ವ ಬಂಧು ಸಲೀಮ್ ಎಲ್ಲ ರೀತಿಯ ಸಹಕಾರ ನೀಡಿದ್ದಾರೆ.
ನಸೀಂ ಮಸೀದಿಯಲ್ಲಿ ನಡೆದ ಜನಾಝ ನಮಾಝ್ ಹಾಗೂ ಬಳಿಕ ನಡೆದ ದಫನ ಕ್ರಿಯೆಯಲ್ಲಿ ಕೆಸಿಎಫ್ ನೇತಾರರಾದ ಹಸನ್ ಸಾಗರ್, ಜಾಫರ್ ಸಾದಿಕ್ ತಂಗಳ್, ಶರೀಫ್ ಮದನಿ ಲಾಯ್ಲ ಹಾಗೂ ಮೃತರ ಬಂಧುಗಳು, ಆಪ್ತರು, ಸ್ಥಳೀಯರು ಸೇರಿದಂತೆ ನೂರಾರು ಜನರು ಭಾಗವಾಗಿದ್ದರು.
ಮೃತರು ಪತ್ನಿ , ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ