ರಿಯಾದ್: ಕುಂದಾಪುರ ತಾಲೂಕಿನ ಕೋಡಿ ನಿವಾಸಿ ಉಸ್ಮಾನ್ (48) ಎಂಬವರು ಮೊನ್ನೆ ಇಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸಂಘಟನೆಯ ನೆರವಿನೊಂದಿಗೆ ಇಲ್ಲಿನ ನಸೀಂ ಸಾರ್ವಜನಿಕ ಖಬರಸ್ಥಾನದಲ್ಲಿ ದಫನ ಮಾಡಲಾಯಿತು.
ಕಳೆದ ಹದಿನೈದು ವರ್ಷಗಳಿಂದ ರಿಯಾದ್ ನ ವಿವಿಧ ಭಾಗಗಳಲ್ಲಿ ಕಂಪ್ಯೂಟರ್ ಬಿಡಿ ಭಾಗಗಳ ಮಾರಾಟ ನಡೆಸುತ್ತಿದ್ದ ಉಸ್ಮಾನ್ ರವರಿಗೆ ಮೊನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಅಸುನೀಗಿದ್ದರು.

ಕರಾವಳಿ ಮೂಲದ ವ್ಯಕ್ತಿಯೊಬ್ಬರ ನಿಧನವಾಗಿದೆ ಎಂಬ ಸುದ್ದಿ ತಿಳಿದುಕೊಂಡ ಕೆಸಿಎಫ್ ರಿಯಾದ್ ಝೋನ್ ಮುಖಂಡರು ತಕ್ಷಣವೇ ಸ್ಪಂದಿಸಿ ಮೃತರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದ ಉಬೈದ್ ಆಸ್ಪತ್ರೆಗೆ ತೆರಳಿ ಮರಣೋತ್ತರ ಕ್ರಿಯೆಗೆ ಅಗತ್ಯವಿರುವ ದಾಖಲೆಗಳನ್ನು ಹೊಂದಿಸಲು ನೆರವಾಗಿದ್ದಾರೆ.
ಕೆಸಿಎಫ್ ರಿಯಾದ್ ಝೋನ್ ನಾಯಕ ಮಜೀದ್ ವಿಟ್ಲ, ಭಾರತೀಯ ರಾಯಭಾರಿ ಕಚೇರಿ, ಸೌದಿ ಪಾಸ್ಪೋರ್ಟ್ ಇಲಾಖೆ, ಸ್ಥಳೀಯ ಪೋಲಿಸ್ ಸ್ಟೇಶನ್ ಸೇರಿದಂತೆ ವಿವಿಧ ಇಲಾಖೆಗಳಿಂದ ಹಾಗೂ ಊರಿನ ಕುಟುಂಬಸ್ಥರಿಂದ ದೊರೆಯಬೇಕಾಗಿದ್ದ ಕಾಗದಪತ್ರಗಳನ್ನು ಸರಿಪಡಿಸಲು ನೆರವಾಗಿದ್ದು ಮೃತರ ಸಹೋದರ ಅಬ್ದುರಹೀಂ ಹಾಗೂ ಇನ್ನೋರ್ವ ಬಂಧು ಸಲೀಮ್ ಎಲ್ಲ ರೀತಿಯ ಸಹಕಾರ ನೀಡಿದ್ದಾರೆ.
ನಸೀಂ ಮಸೀದಿಯಲ್ಲಿ ನಡೆದ ಜನಾಝ ನಮಾಝ್ ಹಾಗೂ ಬಳಿಕ ನಡೆದ ದಫನ ಕ್ರಿಯೆಯಲ್ಲಿ ಕೆಸಿಎಫ್ ನೇತಾರರಾದ ಹಸನ್ ಸಾಗರ್, ಜಾಫರ್ ಸಾದಿಕ್ ತಂಗಳ್, ಶರೀಫ್ ಮದನಿ ಲಾಯ್ಲ ಹಾಗೂ ಮೃತರ ಬಂಧುಗಳು, ಆಪ್ತರು, ಸ್ಥಳೀಯರು ಸೇರಿದಂತೆ ನೂರಾರು ಜನರು ಭಾಗವಾಗಿದ್ದರು.
ಮೃತರು ಪತ್ನಿ , ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ