ರಿಯಾದ್: ಕುಂದಾಪುರ ತಾಲೂಕಿನ ಕೋಡಿ ನಿವಾಸಿ ಉಸ್ಮಾನ್ (48) ಎಂಬವರು ಮೊನ್ನೆ ಇಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸಂಘಟನೆಯ ನೆರವಿನೊಂದಿಗೆ ಇಲ್ಲಿನ ನಸೀಂ ಸಾರ್ವಜನಿಕ ಖಬರಸ್ಥಾನದಲ್ಲಿ ದಫನ ಮಾಡಲಾಯಿತು.
ಕಳೆದ ಹದಿನೈದು ವರ್ಷಗಳಿಂದ ರಿಯಾದ್ ನ ವಿವಿಧ ಭಾಗಗಳಲ್ಲಿ ಕಂಪ್ಯೂಟರ್ ಬಿಡಿ ಭಾಗಗಳ ಮಾರಾಟ ನಡೆಸುತ್ತಿದ್ದ ಉಸ್ಮಾನ್ ರವರಿಗೆ ಮೊನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಅಸುನೀಗಿದ್ದರು.

ಕರಾವಳಿ ಮೂಲದ ವ್ಯಕ್ತಿಯೊಬ್ಬರ ನಿಧನವಾಗಿದೆ ಎಂಬ ಸುದ್ದಿ ತಿಳಿದುಕೊಂಡ ಕೆಸಿಎಫ್ ರಿಯಾದ್ ಝೋನ್ ಮುಖಂಡರು ತಕ್ಷಣವೇ ಸ್ಪಂದಿಸಿ ಮೃತರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದ ಉಬೈದ್ ಆಸ್ಪತ್ರೆಗೆ ತೆರಳಿ ಮರಣೋತ್ತರ ಕ್ರಿಯೆಗೆ ಅಗತ್ಯವಿರುವ ದಾಖಲೆಗಳನ್ನು ಹೊಂದಿಸಲು ನೆರವಾಗಿದ್ದಾರೆ.
ಕೆಸಿಎಫ್ ರಿಯಾದ್ ಝೋನ್ ನಾಯಕ ಮಜೀದ್ ವಿಟ್ಲ, ಭಾರತೀಯ ರಾಯಭಾರಿ ಕಚೇರಿ, ಸೌದಿ ಪಾಸ್ಪೋರ್ಟ್ ಇಲಾಖೆ, ಸ್ಥಳೀಯ ಪೋಲಿಸ್ ಸ್ಟೇಶನ್ ಸೇರಿದಂತೆ ವಿವಿಧ ಇಲಾಖೆಗಳಿಂದ ಹಾಗೂ ಊರಿನ ಕುಟುಂಬಸ್ಥರಿಂದ ದೊರೆಯಬೇಕಾಗಿದ್ದ ಕಾಗದಪತ್ರಗಳನ್ನು ಸರಿಪಡಿಸಲು ನೆರವಾಗಿದ್ದು ಮೃತರ ಸಹೋದರ ಅಬ್ದುರಹೀಂ ಹಾಗೂ ಇನ್ನೋರ್ವ ಬಂಧು ಸಲೀಮ್ ಎಲ್ಲ ರೀತಿಯ ಸಹಕಾರ ನೀಡಿದ್ದಾರೆ.
ನಸೀಂ ಮಸೀದಿಯಲ್ಲಿ ನಡೆದ ಜನಾಝ ನಮಾಝ್ ಹಾಗೂ ಬಳಿಕ ನಡೆದ ದಫನ ಕ್ರಿಯೆಯಲ್ಲಿ ಕೆಸಿಎಫ್ ನೇತಾರರಾದ ಹಸನ್ ಸಾಗರ್, ಜಾಫರ್ ಸಾದಿಕ್ ತಂಗಳ್, ಶರೀಫ್ ಮದನಿ ಲಾಯ್ಲ ಹಾಗೂ ಮೃತರ ಬಂಧುಗಳು, ಆಪ್ತರು, ಸ್ಥಳೀಯರು ಸೇರಿದಂತೆ ನೂರಾರು ಜನರು ಭಾಗವಾಗಿದ್ದರು.
ಮೃತರು ಪತ್ನಿ , ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು