ಮಂಗಳೂರು:ಸುಮಾರು 7 ದಶಕ ಗಳ ತನಕ ದಕ್ಷಿಣ ಕರ್ನಾಟಕದ ಉಳ್ಳಾಲದಲ್ಲಿ ಬಂದು ದೀನೀ ಪ್ರಭೋದನೆಯೊಂದಿಗೆ ರಾಷ್ಟ್ರಾದ್ಯಂತ ಅಹ್ಲು ಸುನ್ನತ್ ವಲ್-ಜಮಾಅತ್ ನೆಲೆಯೂರಲು ಕಾರಣಕರ್ತರಾದ ಆಧ್ಯಾತ್ಮಿಕ ನಾಯಕ ಮರ್ಹೂಂ ಸಯ್ಯದ್ ತಾಜುಲ್ ಉಲಮಾ ಅಬ್ದುರಹ್ಮಾನ್ ಕುಂಞಿಕೋಯ ತಂಙಳ್ ಅಲ್ ಬುಖಾರಿರವರ 5 ನೇ ಉರೂಸ್ ಡಿಸೆಂಬರ್ 7,8,9 ಎಂಬೀ ದಿನಾಂಕಗಳಲ್ಲಿ ಎಟ್ಟಿಕುಲಂನಲ್ಲಿ ನಡೆಯುತ್ತದೆ.
ಉನ್ನತ ಸಾದಾತ್ ಗಳು,ಉನ್ನತ ಉಲಮಾ,ಉಮರಾ ನೇತಾರರು,ಸಂಘಟನಾ ನಾಯಕರು ಭಾಗವಹಿಸುವ ಈ ಉರೂಸ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಇರುವ ಎಲ್ಲಾ ಸುನ್ನೀ ಕುಟುಂಬದ ನಾಯಕರು,ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ಕರೆ ನೀಡಿದ್ದಾರೆ.
ಉರೂಸ್ ಪ್ರಯುಕ್ತ ಡಿಸೆಂಬರ್ 7 ಶುಕ್ರವಾರ ಬೆಳಿಗ್ಗೆ 7:00 ಗಂಟೆಗೆ ಉಳ್ಳಾಲ ಸಯ್ಯದ್ ಮದನಿ ಝಿಯಾರತ್ ನೊಂದಿಗೆ ಸಂದಲ್ ಜಾಥಾವು ಸಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆ,ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ,ಸಯ್ಯದ್ ಖುಬೈಬ್ ತಂಙಳ್ ಉಳ್ಳಾಲ,ಸಿರಾಜುದ್ದೀನ್ ಸಖಾಫಿ ಕನ್ಯಾನರವರ ನೇತೃತ್ವದಲ್ಲಿ ಎಟ್ಟಿಕುಲಂಗೆ ಹೊರಡಲಿದೆ.ಸುನ್ನೀ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಶುಕ್ರವಾರ ಬೆಳಿಗ್ಗೆ 6:30 ಗಂಟೆಗೆ ಉಳ್ಳಾಲ ಸಯ್ಯದ್ ಮದನಿ ದರ್ಗಾ ವಠಾರಕ್ಕೆ ವಾಹನಗಳೊಂದಿಗೆ ಬಂದು ಸಹಕರಿಸುವಂತೆ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ಹಾಗೂ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ