ನವದೆಹಲಿ: ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ನೀಡಿರುವ ಪ್ರದರ್ಶನಕ್ಕೆ ಸಂತಸ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ ಈ ಗೆಲುವು ಸಣ್ಣ ಉದ್ದಿಮೆದಾರರು,ರೈತರು,ಹಾಗೂ ಜನಸಾಮಾನ್ಯರಿಗೆ ದೊರಕಿದಂತಹ ಗೆಲುವು ಎಂದು ಬಣ್ಣಿಸಿದರು.
ಈ ಗೆಲುವು ಕಠಿಣ ಸಂದರ್ಭದಲ್ಲಿ ನಮ್ಮ ಸಿದ್ದಾಂತದ ಪರವಾಗಿ ಹೋರಾಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ ದೊರಕಿದಂತಹ ಗೆಲುವು ಅದ್ದರಿಂದ ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ ಎಂದರು.
ಈಗ ಕಾಂಗ್ರೆಸ್ ಪಕ್ಷದ ಮೇಲೆ ಮಹತ್ತರವಾದ ಜವಾಬ್ದಾರಿ ಇದ್ದು ನಾವು ಜನರನ್ನು ಆಲಿಸಿದ್ದೇವೆ ಅವರಿಗೆ ಒಂದು ದೃಷ್ಟಿಕೋನವನ್ನು ನೀಡಿದ್ದೇವೆ ಎಂದರು.ಯುವಕರಲ್ಲಿ ಪ್ರಧಾನಿ ಮೋದಿ ಉದ್ಯೋಗ ಸೃಷ್ಟಿ ಭರವಸೆಯನ್ನು ಈಡೇರಿಸಲಿಲ್ಲ ಎನ್ನುವ ಭಾವನೆ ಬಂದಿತ್ತು, ಅದೇ ರೀತಿ ರೈತರಲ್ಲಿಯೋ ಸಹ ಆ ಭಾವನೆ ಗಾಡವಾಗಿತ್ತು ಎಂದು ರಾಹುಲ್ ಗಾಂಧಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರತಿಪಕ್ಷಗಳ ಏಕತೆಯನ್ನು ಪ್ರಸ್ತಾಪಿಸಿದ ರಾಹುಲ್ ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳು ಒಂದಾಗಿ ಕಾರ್ಯನಿರ್ವಹಿಸುತ್ತವೆ ಎಂದರು. ಇನ್ನು ಮುಂದುವರೆದು ಮುಂಬರುವ 2019 ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಕಷ್ಟಕರ ಎಂದರಲ್ಲದೆ ಯುವಕರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ ಎಂದು ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ