ಬಂಟ್ವಾಳ ತಾಲೂಕಿಗೆ ಒಳಪಟ್ಟ ಕಕ್ಯಪದವು ಎಂಬ ಊರು ನಾಡಿನ ಜನತೆಗೆ ಚಿರಪರಿಚಿತವಾಗಿದೆ. ಕಕ್ಯಪದವು ಜಮಾಅತಿಗೆ ಒಳಪಟ್ಟಂತಹ ಜನತೆಗೆ ಉಪಕಾರವಾಗುವ ರೀತಿಯಲ್ಲಿ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದರ ಸಾರಥ್ಯದ ಮರ್ಕಝ್ ನ ಅಧೀನದಲ್ಲಿ ಕಕ್ಯಪದವಿನ ಮಣ್ಣಿನಲ್ಲಿ ನಾಲ್ಕನೇ ಮಸ್ಜಿದ್ ನಿರ್ಮಾಣ ಗೊಂಡು ಇದೀಗ ಉದ್ಘಾಟನಾ ಸಂಭ್ರಮದಲ್ಲಿದೆ, ಅಲ್ ಹಂದುಲಿಲ್ಲಾಹ್..
ನೂತನ ಮಸ್ಜಿದ್ ಉದ್ಘಾಟನಾ ಸಮಾರಂಭ
ಕಕ್ಯಪದವು ಕ್ವಾಟ್ರಸ್ ನಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಮಸ್ಜಿದ್ ನ ಉದ್ಘಾಟನಾ ಸಮಾರಂಭವು ನಾಳೆ (14/12/2018) ಅಸರ್ ನಮಾಝಿನ ಬಳಿಕ ನಡೆಯಲಿದ್ದು ಪ್ರಸ್ತುತ ಕಾರ್ಯಕ್ರಮ ದಲ್ಲಿ ಅಹ್ಲುಬೈತಿನ ಪರಂಪರೆ ಅಸೈಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ಮಸ್ಜಿದಿನ ವಕ್ಫ್ ನೆರವೇರಿಸುತ್ತಾ ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣವನ್ನು ಕಕ್ಯಪದವು ಜುಮಾ ಮಸ್ಜಿದ್ ಖತೀಬರಾದ ಬಹು/ ಅಬೂಸ್ವಾಲಿಹ್ ಖಾಮಿಲ್ ಸಖಾಫಿ ಬೆಳ್ಮ ರವರು ಮಾಡಲಿದ್ದಾರೆ, ನಂತರ ಮಗ್ರಿಬ್ ನಮಾಝಿನ ಬಳಿಕ ಕಕ್ಯಪದವು ಜುಮಾ ಮಸ್ಜಿದ್ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಕಕ್ಯಪದವು ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಮತ ಪ್ರಭಾಷಣ ನಡೆಯಲಿದ್ದು ಕಾರ್ಯಕ್ರಮದಲ್ಲಿ ಪ್ರಭಾಷಣ ರಂಗದಲ್ಲಿ ತನ್ನ ಅದ್ಭುತವಾದ ವಾಕ್ ಚಾತುರ್ಯದ ಮೂಲಕ ಜನಮನ್ನಣೆ ಗಳಿಸಿದ ಯುವ ಪ್ರಭಾಷಕರು, ಮೂಡಡ್ಕ ಸ್ಥಾಪನೆಯ ಮುದರ್ರಿಸರಾದ ಬಹು/ ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರು ರವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಪ್ರಸ್ತುತ ಸಮಾರಂಭದಲ್ಲಿ ಸೈಯ್ಯಿದ್ ಸಾದಾತುಗಳು ಉಲಮಾ ನೇತಾರರು, ಉಮರಾ ನಾಯಕರುಗಳು, ಸಂಘಟನಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ, ಅದ್ದರಿಂದ ಆ ಸಮಾರಂಭಕ್ಕೆ ತಮಗೆಲ್ಲಾರಿಗೂ ಆದರದ ಸುಸ್ವಾಗತ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ