ಬೆಂಗಳೂರು: ಫೆಬ್ರವರಿಯಲ್ಲಿ ಎಸ್ಎಸ್ಎಫ್ ರಾಷ್ಟ್ರೀಯ ಸಮ್ಮೇಳನ ರಾಮ್ ಲೀಲಾ ಮೈದಾನ ದೆಹಲಿಯಲ್ಲಿ ನಡೆಯಲಿದೆ. ವಿವಿಧ ರಾಜ್ಯಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಪ್ರಸ್ತುತ ಸಮ್ಮೇಳನದ ಅಧಿಕೃತ ಘೋಷಣಾ ಸಮಾವೇಶವು ಬೆಂಗಳೂರಿನ ಐಇಬಿ ಆಡಿಟೋರಿಯಂನಲ್ಲಿ ನಾಳೆ (ಡಿ. 23) ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ಬಹು: ಶಂಸುಲ್ ಹಕ್ ಖಾದ್ರಿ, (ಅಧ್ಯಕ್ಷರು ಕರ್ನಾಟಕ ಜಂಇಯ್ಯತುಲ್ ಉಲೇಮಾ) ಮತ್ತು ಮಾಜಿ ಸಚಿವ ಕೆ. ರಹಮಾನ್ ಖಾನ್ ಮುಖ್ಯ ಅಥಿತಿಗಳಾಗಿ ಆಗಮಿಸುವರು..SSF ರಾಷ್ಟ್ರೀಯ ಅಧ್ಯಕ್ಷ ಶೌಕತ್ ನಈಮಿ ಅಲ್ ಬುಖಾರಿ ಕಾಶ್ಮೀರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕ್ಕರ್ ಸಿದ್ದೀಕ್ M A, ಎನ್.ಕೆ.ಎಂ. ಶಾಫಿ ಸಅದಿ, ಎಸ್ಎಸ್ಎ ಖಾದರ್ ಹಾಜಿ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಸಂಘಟನೆಯ ಸಬಲೀಕರಣದ ಬಗ್ಗೆ ಮತ್ತು ಸಾಂಘಿಕ ಚಟುವಟಿಕೆಗಳನ್ನು ಇಡೀ ರಾಜ್ಯಕ್ಕೆ ಹರಡುವುದು, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮುಸ್ಲಿಮ್ ಮತ್ತು ಅಲ್ಪಸಂಖ್ಯಾತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಈ ಸಮ್ಮೇಳನ ಚರ್ಚಿಸಲಿದೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಶಿಕ್ಷಣ ವಲಯದಲ್ಲಿ ಎಸ್ಎಸ್ಎಫ್ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಅರ್ಹ ವಿದ್ಯಾರ್ಥಿಗಳಿಗೆ ಆಹಾರ ಮತ್ತು ವಸತಿ ಸೌಕರ್ಯ ಒದಗಿಸಿ, ಎಸ್ಎಸ್ಎಫ್ ನೈತಿಕ ಮೌಲ್ಯ ಆಧಾರಿತ ಶಿಕ್ಷಣ ನೀಡುತ್ತಿದೆ.
ಸಮ್ಮೇಳನದ ಅಧಿಕೃತ ಘೋಷಣೆಗೆ ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ