ಬಜ್ಪೆ.ಡಿ,23: ಕೊಂಚಾರ್ ಯೂತ್ ಕೌನ್ಸಿಲ್ ಅಸೋಸಿಯೇಷನ್ (ರಿ) ಪ್ರಾಯೋಜಕತ್ವದಲ್ಲಿ ಎ.ಜೆ ಹಾಸ್ಪಿಟಲ್ ಮಂಗಳೂರು ಇವರ ಸಹಕಾರದೊಂದಿಗೆ ದಿನಾಂಕ 23-12-2018 ರಂದು ಬೃಹತ್ ರಕ್ತದಾನ ಶಿಬಿರವು ಬಜ್ಪೆ ಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಬೆಳಗ್ಗೆ 9:30 ಕ್ಕೆ ಪ್ರಾರಂಭಗೊಂಡ ರಕ್ತದಾನ ಶಿಬಿರವು ಅಪರಾಹ್ನ 1 ಗಂಟೆಯವರೆಗೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಏ.ಕೆ ಅಶ್ರಫ್ ಜೋಕಟ್ಟೆ(ಪಿಎಫ್ಐ ರಾಜ್ಯ ಸಮಿತಿ ಸದಸ್ಯರು)ತನ್ನ ಅಧ್ಯಕ್ಷೀಯ ಭಾಷಣದಲ್ಲಿ ರಕ್ತದಾನದ ಮಹತ್ವದ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಬಜ್ಪೆ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ, ನಜೀರ್, ಆಯಿಷಾ, ಕೊಂಚಾರ್ ಯೂತ್ ಕೌನ್ಸಿಲ್ ಅಸೋಸಿಯೇಷನ್ ನಿರ್ವಾಹಕರಾದ ಸಫ್ವಾನ್, ತಾಜುದ್ದಿನ್(ಉಪಾಧ್ಯಕ್ಷರು ಆಲ್ ಕಾಲೇಜು ಸ್ಟೂಡೆಂಟ್ ಯೂನಿಯನ್ ದ.ಕ), ರಫೀಕ್, ರಿಜ್ವಾನ್, ಶಾಫಿ, ರಾಹಿಲ್ ಸಲ್ಮಾನ್, ಕಲಂದರ್,ಶಿಯಾಬ್ ಮತ್ತಿತರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು 86 ರಕ್ತದಾನಿಗಳು ರಕ್ತದಾನ ಮಾಡಿದರು.ಝಹಿಮ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.
ವರದಿ:ಮಾಧ್ಯಮ ವಿಭಾಗ
ಕೊಂಚಾರ್ ಯೂತ್ ಕೌನ್ಸಿಲ್ಅಸೋಸಿಯೇಷನ್(ರಿ)















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್