ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದ ವಿಸ್ತರಣೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆ ಪೂರ್ಣ ಗೊಂಡಿದೆ.
ಖಾತೆ ಹಂಚಿಕೆ ವಿಚಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರಿಗೆ ಜಯ ಸಿಕ್ಕಿದೆ. ಅಲ್ಲದೇ ಹಾಲಿ ಗೃಹ ಸಚಿವ ಸ್ಥಾನ ಹೊಂದಿದ್ದ ಜಿ.ಪರಮೇಶ್ವರ್ ಅವರ ಖಾತೆ ಕೈತಪ್ಪಿದೆ ಎಂದು ಮೂಲಗಲಿಂದ ತಿಳಿದು ಬಂದಿದೆ.
ಯಾವೆಲ್ಲಾ ಖಾತೆ ಹಂಚಿಕೆಯಾಗಿದೆ?
ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಪಟ್ಟು ಹಿಡಿದಂತೆ ಗೃಹ ಖಾತೆಯನ್ನು ಪಡೆದಿದ್ದಾರೆ. ಇನ್ನೂ ಯಮಕನಮರಡಿ ಶಾಸಕರಾಗಿರುವ ಸತೀಶ್ ಜಾರಸಕಿಹೊಳಿ ಅಬಕಾರಿ ಖಾತೆಯನ್ನು ಬಿಟ್ಟು ಯಾವುದೇ ಖಾತೆಯನ್ನು ನೀಡಿದರೂ ನಿರ್ವಹಿಸುತ್ತೇನೆಂದು ಹೇಳಿಕೆ ನೀಡಿದ್ದರು. ಹೀಗಾಗಿ ಅವರಿಗೆ ಅರಣ್ಯ ಇಲಾಖೆಯ ಖಾತೆಯನ್ನು ನೀಡಲಾಗಿದೆ.
ಇದಲ್ಲದೇ ಶಾಸಕರಾದ ಸಿ.ಎಸ್.ಶಿವಳ್ಳಿಗೆ ಪೌರಾಡಳಿತ ಇಲಾಖೆ, ರಹೀಂ ಖಾನ್ ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ, ಎಂ.ಟಿ.ಬಿ. ನಾಗರಾಜ್ ವಸತಿ ಇಲಾಖೆ, ತುಕಾರಂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆರ್.ಬಿ.ತಿಮ್ಮಾಪುರ ಕೌಶಾಲ್ಯಾಭಿವೃದ್ಧಿ ಇಲಾಖೆ ಹಾಗೂ ಪರಮೇಶ್ವರ್ ನಾಯಕ್ ಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ