ಮಂಗಳೂರು : ಜಗತ್ತಿಗೆ ಮಾದರಿ ಜೀವನ ಕ್ರಮವನ್ನು ಪರಿಚಯಿಸಿ ನುಡಿದಂತೆಯೇ ಬದುಕಿ ಬಾಳಿದ ಲೋಕ ನಾಯಕ ಹಝ್ರತ್ ಮುಹಮ್ಮದ್ ಪೈಗಂಬರ್ (ಸ.ಅ) ರ ವ್ಯಕ್ತಿತ್ವ ವನ್ನು ಅಶ್ಲೀಲ ಮತ್ತು ಅಪವಾದಗಳೊಂದಿಗೆ ನಿರೂಪಿಸಿ ಮುಸ್ಲಿಮ್ ಜನ- ಮನವನ್ನು ಘಾಸಿಗೊಳಿಸಿದ ಸುವರ್ಣ ಕನ್ನಡ ಟಿ.ವಿ.ಚಾನಲ್ ನ ನಿರೂಪಕ ಅಜಿತ್ ಹನುಮಕ್ಕ ಘಟನೆ ಖಂಡನೀಯವಾಗಿದೆ.
ಅಜಿತ್ ಹನುಮಕ್ಕನನ್ನು ಭಾರತೀಯ ದಂಡ ಸಂಹಿತೆ ಗೆ ಅನುಗುಣವಾಗಿ ಕೂಡಲೇ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕೆಂದು ಸುನ್ನೀ ಮ್ಯಾನೇಜ್’ಮೆಂಟ್ ಅಸೋಷಿಯೇಶನ್ (ರಿ) SMA ರಾಜ್ಯಾ ಉಪಧ್ಯಕ್ಷರಾದ ಹಾಜೀ ಕೆ.ಎ.ಹಮೀದ್ ಕೊಡಂಗಾಯಿ ಅವರು ಹೇಳಿದರು.
ಇಂತಹ ಮಾದ್ಯಮದವರು ಸಮಾಜಕ್ಕೆ ಅಪಾಯಕಾರಿ. ಇಂತಹ ಹೇಳಿಕೆ ಗಳ ಮೂಲಕ ಸಮಾಜದಲ್ಲಿ ಅಶಾಂತಿ ಉಂಟಾಗಲಿದೆ ಸಮಾಜದ ಶಾಂತಿ ಒಗ್ಗಟ್ಟನ್ನು ಮುರಿಯುವ ಇಂತವರ ವಿರುದ್ಧ ಸ್ವಯಂ ಪ್ರೇರಿತರಾಗಿ ಅಧಿಕಾರಿಗಳು ಕೇಸು ದಾಖಲಿಸಬೇಕು ಎಂದು ಅವರು ಹೇಳಿದರು. ಮುಸ್ಲಿಂ ಸಮುದಾಯದ ಜನಪ್ರತಿನಿದಿಗಳು ವಿಧಾನಸಭೆಯೊಳಗೆ ಧ್ವನಿ ಎತ್ತಬೇಕು ಇಲ್ಲವಾದರೆ ಅಂತವರು ಮುಸ್ಲಿಮ್ ಸಮುದಾಯದ ನಾಯಕರೆಂದು ಹೇಳಲು ಯಾವ ನ್ಯೆತಿಕ ಹಕ್ಕಿದೇ ಎಂದು ಅವರು ಪ್ರಶ್ನಿಸಿದರು.
ಪ್ರವಾದಿ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ. ಆದರೆ, ಪೊಲೀಸ್ ಇಲಾಖೆ ಮಾತ್ರ ಈ ಪ್ರಕರಣವನ್ನು ಲಘುವಾಗಿ ಪರಿಘಣಿಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಜರಗಿಸಿಲ್ಲ ಎಂದು ದೂರಿದರು ಈ ಬಗ್ಗೆ ಪೊಲೀಸ್ ಇಲಾಖೆ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಇದರ ವಿರುದ್ಧ ಹೋರಾಟ ಅನಿವಾರ್ಯ ಏಂದು ಅವರು ನುಡಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ