ಪಉಳ್ಳಾಲ:ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ರವರ ನೇತೃತ್ವದಲ್ಲಿ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಮಯದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸದಸ್ಯ ಸಯ್ಯದ್ ಖುಬೈಬ್ ತಂಙಳ್,ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ,ಕೋಶಾಧಿಕಾರಿ ಶರೀಫ್ ಮುಡಿಪು,ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ,ಡಿವಿಷನ್ ಸದಸ್ಯ ಜಾಫರ್ ಅಳೇಕಲ,ಇಸ್ಮಾಯಿಲ್ ಕೆ.ಸಿ.ನಗರ,ಸಲೀಂ ಅಜ್ಜಿನಡ್ಕ,ನಾಸಿರ್ ಅಜ್ಜಿನಡ್ಕ,ಶಬೀರ್ ಪೇಟೆ,ಸಿರಾಜ್ ಕೆ.ಸಿ.ನಗರ ಉಪಸ್ಥಿತರಿದ್ದರು.