janadhvani

Kannada Online News Paper

ಪ್ರವಾದಿ ನಿಂದನೆ: ಕೇಸು ದಾಖಲಿಸದ ಪೋಲೀಸರ ಕ್ರಮದ ವಿರುದ್ಧ ಸಚಿವರಿಗೆ ಮನವಿ

ಮಂಗಳೂರು: ಪ್ರವಾದಿ ನಿಂದನೆ ಮಾಡಿದ ಸುವರ್ಣ ಚಾನೆಲ್ ನ ನಿರೂಪಕ ಅಜಿತ್ ಹನುಮಕ್ಕನ್ ರವರ ವಿರುದ್ಧ ರಾಜ್ಯಾದ್ಯಂತ ವಿವಿಧ ಸಂಘಟನೆಗಳು ಹಲವು ಠಾಣೆಗಳಲ್ಲಿ ದೂರು ನೀಡಿದರೂ ಕೇಸು ದಾಖಲಿಸದ ಪೋಲೀಸರ ಕ್ರಮದ ವಿರುದ್ಧ ಎಸ್ಸೆಸ್ಸೆಫ್ ಇಹ್ಸಾನ್ ರಾಜ್ಯಾಧ್ಯಕ್ಷರು ಮೌಲಾನ ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು ಅವರು ಮಾನ್ಯ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರನ್ನು ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಚಿವರು ಪೋಲೀಸ್ ಆಯುಕ್ತರಿಗೆ ಕರೆ ಮಾಡಿ ದೂರಿನ ಬಗ್ಗೆ ಮಾಹಿತಿ ನೀಡಲು ಸೂಚಿಸಿದರು. ತಕ್ಷಣ ಮಾಹಿತಿ ಪಡೆದ ಆಯುಕ್ತರು, ಬೆಂಗಳೂರಿನಲ್ಲಿ ಕೇಸು ದಾಖಲಿಸಿದ್ದಾಗಿ ಸಚಿವರಿಗೆ ಮಾಹಿತಿ ನೀಡಿದರು.