ಇಸ್ಲಾಮ್ ಮತ್ತು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವ ಸಲ್ಲಮ್ ರವರ ಬಗ್ಗೆ ಸುವರ್ಣ ನ್ಯೂಸ್ ನ ಚಾನೆಲ್ ನ ನಿರೂಪಕ ಅಜಿತ್ ಹನುಮಕ್ಕನವರು ನೀಡಿರುವ ಹೇಳಿಕೆ ಯನ್ನು ಕೆ ಸಿ ಎಫ್ ಕತಾರ್ ರಾಷ್ಟ್ರೀಯ ಸಮಿತಿ ಖಂಡನೆ ವ್ಯಕ್ತಪಡಿಸುತ್ತಿದೆ.
ಶ್ರೀರಾಮನ ಬಗ್ಗೆ ಚರ್ಚೆ ನಡೆಸುವಾಗ ರಾಮನನ್ನು ಸಮರ್ಥಿಸಲು ಬೇಕಾದ ಹಿಂದೂ ಧರ್ಮದ ಅದಾರ ಗಳನ್ನು ಮುಂದಿಟ್ಟು ಭಗವಾನ್ ನ ವಾದವನ್ನು ಬಾಲಿಶಮಾಡಬಹುದಿತ್ತು, ಅದನ್ನು ಬಿಟ್ಟು “ಕೈಲಾಗದವ ಮೈ ಪರಚಿ ಕೊಂಡ” ಎಂಬ ನಾಣ್ಣುಡಿಯಂತೆ ಇಸ್ಲಾಮ್ ನ ಮೇಲೆ ಎರಗಿದ ಇವರ ನಿಲುವು ಇವರಿಗಿರುವ ಮಾಧ್ಯಮ ಧರ್ಮದ ಸಾಮಾನ್ಯ ಜ್ಞಾನ ವನ್ನು ಎತ್ತಿ ತೋರಿಸುತ್ತಿದೆ . ಕನಿಷ್ಠ ಹಿಂದೂ ಧರ್ಮದ ಇತಿಹಾಸದವಾದರೂ ತಿಳಿದಿರುತ್ತಿದ್ದರೆ ಇಂತಹ ಹೇಳಿಕೆಯನ್ನು ಇವರು ಖಂಡಿತವಾಗಿಯೂ ನೀಡುತ್ತಿರಲಿಲ್ಲ.
ಅರೆಬರೆ ಧಾರ್ಮಿಕ ಅರಿವು ಹಾಗೂ ಸಾಮಾಜಿಕ ಪ್ರಜ್ಞೆ ಹೊಂದಿರುವ ಇವರನ್ನು ತಕ್ಷಣ ಇಂತಹ ಜವಾಬ್ದಾರಿಯುತ ವೃತ್ತಿಯಿಂದ ವಜಾಗೊಳಿಸಬೇಕಾಗಿ ಕೆ ಸಿ ಎಫ್ ಕತಾರ್ ರಾಷ್ಟ್ರೀಯ ಸಮಿತಿ ಆಗ್ರಹಿಸುತ್ತಿದೆ. ಈ ಬಗ್ಗೆ ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಸನ್ನಿವೇಶಗಳಿಗೆ ಅವಕಾಶ ಕೊಡಬಾರದೆಂಬ ಬೇಡಿಕೆಯೊಂದಿಗೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕತಾರ್ ರಾಷ್ಟ್ರೀಯ ಸಮಿತಿಯು ರಾಜ್ಯದ ಮಾನ್ಯ ಮಂತ್ರಿಗಳಾದ ಶ್ರೀ ಯುತ ಕುಮಾರ ಸ್ವಾಮಿ, ಗ್ರಹ ಸಚಿವರಾದ ಎಂ ಬಿ ಪಾಟೀಲ್ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ