ಮಾಣಿ : ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಮಾಣಿ ರೇಂಜ್ ಇದರ ವತಿಯಿಂದ ಮದ್ರಸಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನೊಳಗೊಂಡ “ಪ್ರತಿಭಾ ಸಂಗಮ” ಕಾರ್ಯಕ್ರಮವು ಆದಿತ್ಯವಾರ ಮಾಣಿ ದಾರುಲ್ ಇರ್ಶಾದ್ ವಠಾರದಲ್ಲಿ ನಡೆಯಿತು,ಮಾಣಿ ರೇಂಜ್ ಎಸ್ ಜೆ ಎಂ ಅಧ್ಯಕ್ಷರಾದ ಅಬೂಬಕರ್ ಸಖಾಫಿ ಗಡಿಯಾರ್ ರವರ ಅಧ್ಯಕ್ಷತೆಯಲ್ಲಿ,ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಆದಂ ಮದನಿ ಪುತ್ತೂರು ಪ್ರಾಸ್ತಾವಿಕ ಭಾಷಣ ಮಾಡಿದರು,ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿಯ ಪ್ರಿನ್ಸಿಪಾಲ್ ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಮುಖ್ಯ ಪ್ರಭಾಷಣ ನಡೆಸಿದರು,

ವೇದಿಕೆಯಲ್ಲಿ ಶರೀಫ್ ಸಖಾಫಿ ಮಾಣಿ,ಹನೀಫ್ ಸಖಾಫಿ ಸೂರ್ಯ,ನಾಸಿರ್ ಸಖಾಫಿ ಪೇರಮೊಗರು,ಜಬ್ಬಾರ್ ಮದನಿ ಪೇರಮೊಗರು,ಶರೀಫ್ ಝುಹ್ರಿ ಸತ್ತಿಕಲ್ಲು,ಹೈದರ್ ಸಖಾಫಿ ಕೆಮ್ಮಾನ್ ಕಜೆ,ಇಬ್ರಾಹಿಂ ಮದನಿ ಬುಡೋಳಿ,ರಫೀಕ್ ಮದನಿ ಬರಿಮಾರು,ಹಬೀಬ್ ಶೇರಾ,ಮುಂತಾದ ಹಲವಾರು ಉಲಮಾ ಉಮರಾ ನೇತಾರರು ಉಪಸ್ಥಿತರಿದ್ದರು,ಒಟ್ಟು ಒಂಭತ್ತು ಮದ್ರಸಾಗಳು ಭಾಗವಹಿಸಿದ್ದ ಪ್ರತಿಭಾ ಸಂಗಮದಲ್ಲಿ ಪ್ರಥಮ ಪೇರಮೊಗರು ಮದ್ರಸಾ ದ್ವಿತೀಯ ಕೆಮ್ಮಾನ್ ಕಜೆ ಮದ್ರಸಾ ತೃತೀಯ ಶೇರಾ ಮದ್ರಸಾ ಪ್ರಶಸ್ತಿಗಳನ್ನು ಪಡೆದುಕೊಂಡಿತು, ವೈಯಕ್ತಿಕ ಚಾಂಪಿಯನ್ ಗಳಾಗಿ ಇಯಾಝ್ ಕೆಮ್ಮಾನ್ ಕಜೆ,ಅಜ್ಮಲ್ ಮಾಣಿ,ಅಶ್’ಹರ್ ಪೇರಮೊಗರು ಪ್ರಶಸ್ತಿಗಳನ್ನು ಪಡೆದುಕೊಂಡರು,ಸಮಿತಿಯ ಕನ್ವೀನರ್ ಅಬ್ದುಲ್ ಲತೀಫ್ ಸಅದಿ ಶೇರಾ ಸ್ವಾಗತಿಸಿದರು,ದಾರುಲ್ ಇರ್ಶಾದ್ ಅಧ್ಯಾಪಕರಾದ ನಝೀರ್ ಅಹ್ಮದ್ ಅಮ್ಜದಿ ಸರಳಿಕಟ್ಟೆ ಧನ್ಯವಾದ ಸಮರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ