ಮಾಣಿ : ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಮಾಣಿ ರೇಂಜ್ ಇದರ ವತಿಯಿಂದ ಮದ್ರಸಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನೊಳಗೊಂಡ “ಪ್ರತಿಭಾ ಸಂಗಮ” ಕಾರ್ಯಕ್ರಮವು ಆದಿತ್ಯವಾರ ಮಾಣಿ ದಾರುಲ್ ಇರ್ಶಾದ್ ವಠಾರದಲ್ಲಿ ನಡೆಯಿತು,ಮಾಣಿ ರೇಂಜ್ ಎಸ್ ಜೆ ಎಂ ಅಧ್ಯಕ್ಷರಾದ ಅಬೂಬಕರ್ ಸಖಾಫಿ ಗಡಿಯಾರ್ ರವರ ಅಧ್ಯಕ್ಷತೆಯಲ್ಲಿ,ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಆದಂ ಮದನಿ ಪುತ್ತೂರು ಪ್ರಾಸ್ತಾವಿಕ ಭಾಷಣ ಮಾಡಿದರು,ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿಯ ಪ್ರಿನ್ಸಿಪಾಲ್ ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಮುಖ್ಯ ಪ್ರಭಾಷಣ ನಡೆಸಿದರು,

ವೇದಿಕೆಯಲ್ಲಿ ಶರೀಫ್ ಸಖಾಫಿ ಮಾಣಿ,ಹನೀಫ್ ಸಖಾಫಿ ಸೂರ್ಯ,ನಾಸಿರ್ ಸಖಾಫಿ ಪೇರಮೊಗರು,ಜಬ್ಬಾರ್ ಮದನಿ ಪೇರಮೊಗರು,ಶರೀಫ್ ಝುಹ್ರಿ ಸತ್ತಿಕಲ್ಲು,ಹೈದರ್ ಸಖಾಫಿ ಕೆಮ್ಮಾನ್ ಕಜೆ,ಇಬ್ರಾಹಿಂ ಮದನಿ ಬುಡೋಳಿ,ರಫೀಕ್ ಮದನಿ ಬರಿಮಾರು,ಹಬೀಬ್ ಶೇರಾ,ಮುಂತಾದ ಹಲವಾರು ಉಲಮಾ ಉಮರಾ ನೇತಾರರು ಉಪಸ್ಥಿತರಿದ್ದರು,ಒಟ್ಟು ಒಂಭತ್ತು ಮದ್ರಸಾಗಳು ಭಾಗವಹಿಸಿದ್ದ ಪ್ರತಿಭಾ ಸಂಗಮದಲ್ಲಿ ಪ್ರಥಮ ಪೇರಮೊಗರು ಮದ್ರಸಾ ದ್ವಿತೀಯ ಕೆಮ್ಮಾನ್ ಕಜೆ ಮದ್ರಸಾ ತೃತೀಯ ಶೇರಾ ಮದ್ರಸಾ ಪ್ರಶಸ್ತಿಗಳನ್ನು ಪಡೆದುಕೊಂಡಿತು, ವೈಯಕ್ತಿಕ ಚಾಂಪಿಯನ್ ಗಳಾಗಿ ಇಯಾಝ್ ಕೆಮ್ಮಾನ್ ಕಜೆ,ಅಜ್ಮಲ್ ಮಾಣಿ,ಅಶ್’ಹರ್ ಪೇರಮೊಗರು ಪ್ರಶಸ್ತಿಗಳನ್ನು ಪಡೆದುಕೊಂಡರು,ಸಮಿತಿಯ ಕನ್ವೀನರ್ ಅಬ್ದುಲ್ ಲತೀಫ್ ಸಅದಿ ಶೇರಾ ಸ್ವಾಗತಿಸಿದರು,ದಾರುಲ್ ಇರ್ಶಾದ್ ಅಧ್ಯಾಪಕರಾದ ನಝೀರ್ ಅಹ್ಮದ್ ಅಮ್ಜದಿ ಸರಳಿಕಟ್ಟೆ ಧನ್ಯವಾದ ಸಮರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ