ಎಕೋಣಾಜೆ:ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕಳೆದ ಸಾಲಿನ ಸಕ್ರೀಯ ಕಾರ್ಯಾಚರಣೆಯಿಂದ 11 ಸೆಕ್ಟರ್ ಹಾಗೂ 110 ಯೂನಿಟ್ ಗಳನ್ನು ಹೊಂದಿದ್ದು,ಕಾರ್ಯಚರಣೆಯ ಸರಳತೆಗೆ ಬೇಕಾಗಿ ಉಳ್ಳಾಲ ಡಿವಿಷನನ್ನು ವಿಭಜಿಸಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಹಾಗೂ ಎಸ್ಸೆಸ್ಸೆಫ್ ಮುಡಿಪು ಡಿವಿಷನನ್ನು ಅಸ್ತಿತ್ವಕ್ಕೆ ತರಲಾಯಿತು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು
ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ಸಂಘಟನಾ ತರಗತಿಯನ್ನು ನಡೆಸಿದರು.
ಚುನಾವಣಾ ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಎಸ್ಸೆಸ್ಸೆಫ್ ಜಿಲ್ಲಾ ಕಾರ್ಯದರ್ಶಿ ಸಲೀಂ ಹಾಜಿ ಬೈರಿಕಟ್ಟೆ ಹಾಗೂ ಜಿಲ್ಲಾ ಸದಸ್ಯ ರಶೀದ್ ಹಾಜಿ ವಗ್ಗ ಪ್ರಾಸ್ತಾವಿಕವಾಗಿ ಮಾತನಾಡಿದರು.
ವರದಿ ಹಾಗೂ ಲೆಕ್ಕ ಪತ್ರ ಮಂಡನೆಯ ನಂತರ ಹೊಸ ಡಿವಿಷನ್ ಆದ ಮುಡಿಪು ಡಿವಿಷನ್ ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ತೌಸೀಫ್ ಸ ಅದಿ ಹರೇಕಳ,ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ,ಕೋಶಾಧಿಕಾರಿ ಶರೀಫ್ ಮುಡಿಪು,ಕ್ಯಾಂಪಸ್ ಕಾರ್ಯದರ್ಶಿ ಅಬೂಸ್ವಾಲಿಹ್ ಹರೇಕಳ,ಉಪಾಧ್ಯಕ್ಷರುಗಳಾಗಿ ಇಬ್ರಾಹಿಂ ಅಹ್ಸನಿ ಮಂಜನಾಡಿ,ಸಿದ್ದೀಕ್ ಸಖಾಫಿ ಕಾಯಾರ್,ಕಾರ್ಯದರ್ಶಿಗಳಾಗಿ ನೌಫಲ್ ಕೊಣಾಜೆ,ಮೊಯಿದಿನ್ ಮೋರ್ಲ ಹಾಗೂ ಇನ್ನಿತರ 13 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನಾಯಕರಾದ ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ,ಡಿವಿಷನ್ ನಾಯಕರಾದ ಫಾರೂಕ್ ಸಖಾಫಿ ಮದನಿ ನಗರ,ಆಸಿಫ್ ಸಖಾಫಿ ಮುಡಿಪು ಮಜೀದ್ ಫರೀದ್ ನಗರ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ಸ್ವಾಗತಿಸಿದರು,ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ